ಎಸ್ಸೆಸ್ಸೆಲ್ಸಿಯಲ್ಲಿ ಹಾಸನ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ
Feb 06 2025, 11:45 PM ISTಪ್ರಸ್ತುತದಲ್ಲಿ ಸ್ಪರ್ಧೆ ಹೆಚ್ಚಾಗಿ ಇರುವುದರಿಂದ ಮಕ್ಕಳಿಗೆ ಒತ್ತಡ ನೀಡದೆ, ಆತ್ಮಸ್ಥೈರ್ಯ ತುಂಬಬೇಕು. ಪ್ರಾಮಾಣಿಕ ಅಧ್ಯಯನದ ಜೊತೆಗೆ ಉತ್ತಮ ಪರಿಶ್ರಮದ ಮೂಲಕ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಈ ಬಾರಿ ರಾಜ್ಯದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಹೇಳಿದ್ದಾರೆ. ಮಕ್ಕಳಿಗೆ ಮತ್ತಷ್ಟು ಮಾದರಿ ಪರೀಕ್ಷೆಗಳನ್ನು ಮಾಡಿ, ಗಣಿತ, ವಿಜ್ಞಾನ, ಇಂಗ್ಲೀಷ್ ವಿಷಯದಂತಹ ಕಷ್ಟವಾಗಿರುವ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಟ್ಟು, ಪುನರ್ ಮನನ ಮಾಡಿಸಿ ಎಂದು ತಿಳಿಸಿದರು.