ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

May 03 2025, 12:20 AM IST
ಮಂಗಳೂರಿನಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿಯವರನ್ನು ಹತ್ಯೆ ಮಾಡಿರುವುದನ್ನು ಖಂಡಿಸಿ, ಬಿಜೆಪಿಯಿಂದ ಶುಕ್ರವಾರ ನಗರದ ಹೇಮಾವತಿ ಪ್ರತಿಮೆ ಮುಂದೆ ಪ್ರತಿಭಟಿಸಿದ್ದಲ್ಲದೇ ಹತ್ಯೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಲ್ಲಿಗೇರಿಸುವಂತೆ ಆಗ್ರಹಿಸಿದರು. ಸಾವಿರಾರು ವರ್ಷಗಳಿಂದಲೂ ಕೂಡ ಹಿಂದೂ ಧರ್ಮದ ಮೇಲೆ ಆಕ್ರಮಣ ನಡೆದರೂ ಯಾರೂ ಕೂಡ ಈ ಧರ್ಮವನ್ನು ಇಲ್ಲಿವರೆಗೂ ನಾಶ ಮಾಡಲು ಆಗಿಲ್ಲ. ನೀವು ಇದೇ ರೀತಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಮಾಡುವವರನ್ನು ಪೋಷಿಸಿಕೊಂಡು ಬಂದರೆ ಬಿಜೆಪಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ನೇರವಾಗಿ ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿಗೆ ಹೇಳುತ್ತಿದ್ದೇವೆ ಎಂದು ತಿಳಿಸಿದರು.