ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಕಳಂಕ ತರಲು ಎಡಪಂಥೀಯರ ಯತ್ನ

Aug 18 2025, 12:00 AM IST
ಸರ್ಕಾರ ಸಣ್ಣದೊಂದು ದೂರನ್ನು ಆಧರಿಸಿ ತನಿಖೆಗೆ ಎಸ್‌ಐಟಿ ನೇಮಿಸಿರುವುದು ಆಶ್ಚರ್ಯಕರ. ಎಸ್‌ಐಟಿ ನೇಮಕಕ್ಕೆ ಮುಖ್ಯಮಂತ್ರಿಗಳ ಮೇಲೆ ಒತ್ತಡ ತಂದವರು ಯಾರು ಎಂಬುದು ಸ್ವಷ್ಟವಾಗಿದೆ. ಎಸ್‌ಐಟಿ ತನಿಖೆ ನಡೆಸಲು ಲಕ್ಷಾಂತರ ರುಪಾಯಿ ವೆಚ್ಚವಾಗಿದ್ದು, ಈ ಮೊತ್ತವನ್ನು ದೂರುದಾರರಿಂದಲೇ ಭರಿಸಬೇಕು. ಮಾಸ್ಕ್ ಹಾಕಿರುವ ವ್ಯಕ್ತಿ ಕ್ರಿಮಿನಲ್ ಆಗಿದ್ದು ಹಣದ ವ್ಯಾಮೋಹದಿಂದ ಕೋಟ್ಯಂತರ ಜನರ ಆರಾಧನ ಕ್ಷೇತ್ರಕ್ಕೆ ಹಾನಿ ಉಂಟು ಮಾಡಲು ಯತ್ನಿಸಿದ್ದಾನೆ. ಸದ್ಯ ಭೂಮಿ ಅಗೆದಿರುವ ಪ್ರದೇಶದಲ್ಲಿ ಏನು ದೂರಕಿಲ್ಲ. ಆದ್ದರಿಂದ ಮಾಸ್ಕ್ ಮ್ಯಾನ್‌ಗೆ ಶಿಕ್ಷೆ ವಿಧಿಸಬೇಕು ಎಂದು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ಆರೋಪಿಸಿದರು.