ಕರಾವಳಿ, ಮಲೆನಾಡು ಸೇರಿ ರಾಜ್ಯದ ಹಲವೆಡೆ ಮುಂಗಾರು ಮಳೆ ಅಬ್ಬರಿಸುತ್ತಿದ್ದು, ಗುಡ್ಡ ಕುಸಿತ ಕೂಡ ಮುಂದುವರಿದಿದೆ. ಗುಡ್ಡ ಕುಸಿತದಿಂದಾಗಿ ಕರ್ನಾಟಕ- ಗೋವಾ, ಮಂಗಳೂರು-ಬೆಂಗಳೂರು, ಮಡಿಕೇರಿ-ಮಂಗಳೂರು ಸೇರಿ 9ಕ್ಕೂ ಹೆಚ್ಚು ಹೆದ್ದಾರಿಗಳು ಬಂದ್ ಆಗಿದೆ. ವಾಹನ ಸವಾರರಿಗೆ ಎಚ್ಚರಿಕೆ ನೀಡಲಾಗಿದೆ.