ಅಧಿಕಾರಿಗಳ ಹೆಸರಲ್ಲಿ ಲೆಕ್ಚರರ್‌ಗೆ ಬೆದರಿಸಿ 1.5 ಕೋಟಿ ದರೋಡೆ!

KannadaprabhaNewsNetwork |  
Published : Sep 23, 2025, 02:08 AM ISTUpdated : Sep 23, 2025, 09:41 AM IST
MP Crime news

ಸಾರಾಂಶ

ಖಾಸಗಿ ಪದವಿ ಕಾಲೇಜಿನ ಪ್ರಾಧ್ಯಾಪಕರೊಬ್ಬರಿಗೆ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಒಂದೂವರೆ ಕೋಟಿ ರು.ಗಳನ್ನು ನಾಲ್ವರು ದುಷ್ಕರ್ಮಿಗಳು ದೋಚಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  ಬೆಂಗಳೂರು :  ಖಾಸಗಿ ಪದವಿ ಕಾಲೇಜಿನ ಪ್ರಾಧ್ಯಾಪಕರೊಬ್ಬರಿಗೆ ಸರ್ಕಾರಿ ಅಧಿಕಾರಿಗಳ ಸೋಗಿನಲ್ಲಿ ಬೆದರಿಸಿ ಒಂದೂವರೆ ಕೋಟಿ ರು.ಗಳನ್ನು ನಾಲ್ವರು ದುಷ್ಕರ್ಮಿಗಳು ದೋಚಿರುವ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಟ್ಟಿಗೇನಹಳ್ಳಿ ನಿವಾಸಿ ಗಿರಿರಾಜ ಹಣ ಕಳೆದುಕೊಂಡಿದ್ದು, ಮೂರು ದಿನಗಳ ಹಿಂದೆ ಅವರ ಮನೆಗೆ ನುಗ್ಗಿ ನಾಲ್ವರು ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ. ಈ ದರೋಡೆ ಹಿಂದೆ ಪರಿಚಿತರ ಕೈವಾಡವಿರುವ ಬಗ್ಗೆ ಪೊಲೀಸರು ಶಂಕಿಸಿದ್ದಾರೆ.

ಜಮೀನು ಮಾರಾಟದ ಹಣ:

ಖಾಸಗಿ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಗಿರಿರಾಜ್ ಅವರು, ತಮ್ಮ ಕುಟುಂಬದ ಜತೆ ಕಟ್ಟಿಗೇನಹಳ್ಳಿಯಲ್ಲಿ ನೆಲೆಸಿದ್ದಾರೆ. ಇತ್ತೀಚೆಗೆ ಜಮೀನು ಮಾರಾಟದ 1.5 ಕೋಟಿ ರು. ಹಣವನ್ನು ಅವರು ಮನೆಯಲ್ಲಿಟ್ಟಿದ್ದರು. ಮೂರು ದಿನಗಳ ಹಿಂದೆ ನಕಲಿ ನಂಬರ್ ಪ್ಲೇಟ್ ಬಳಸಿದ್ದ ಕಾರಿನಲ್ಲಿ ಅವರ ಮನೆಗೆ ನಾಲ್ವರು ಅಪರಿಚಿತರು ತೆರಳಿದ್ದರು. ಬಳಿಕ ನಾವು ಡಿಪಾರ್ಟ್‌ಮೆಂಟ್ ನವರು ಎಂದು ಹೇಳಿ ಗಿರಿರಾಜ್ ಅವರಿಗೆ ನಿಮ್ಮ ಮನೆಯಲ್ಲಿ ಅಕ್ರಮವಾಗಿ ಸಂಪಾದಿಸಿದ ಹಣವಿದೆ ಎಂದು ಆರೋಪಿಗಳು ಬೆದರಿಸಿದ್ದಾರೆ. ಬಳಿಕ ಅವರ ಮನೆಯಿಂದ 1.5 ಕೋಟಿ ರು. ನಗದು ಹಾಗೂ 50 ಗ್ರಾಂ ಚಿನ್ನ ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ಕೊಲೆ ಅಂತ್ಯ
ಪೊಲೀಸ್‌ ಠಾಣೆ ಸಮೀಪ ಪಾನಮತ್ತ ದಂಪತಿಯ ರಂಪಾಟ