ಕನ್ನಡಪ್ರಭ ವಾರ್ತೆ ಬೆಂಗಳೂರು
ವರ್ತೂರಿನ ಪ್ರೆಸ್ಟೀಜ್ ಲೇಕ್ಸೈಡ್ ಹ್ಯಾಬಿಟೆಟ್ ಅಪಾರ್ಟ್ಮೆಂಟ್ ನಿವಾಸಿ ರಾಜೇಶ್ ದಮೇರ್ಲಾ ಅವರ ಪುತ್ರಿ ಮಾನ್ಯಾ(10) ಮೃತ ಬಾಲಕಿ. ಗುರುವಾರ ರಾತ್ರಿ 7.30ರ ಸುಮಾರಿಗೆ ಈ ದುರ್ಘಟನೆ ನಡೆದಿದೆ.
ಆಂಧ್ರಪ್ರದೇಶದ ವಿಜಯವಾಡ ಮೂಲದ ರಾಜೇಶ್ ವೃತ್ತಿಯಲ್ಲಿ ಸಾಫ್ಟ್ವೇರ್ ಎಂಜಿನಿಯರ್ ಆಗಿದ್ದಾರೆ. ಪತ್ನಿ ಮತ್ತು ಮಗಳೊಂದಿಗೆ ವರ್ತೂರಿನ ಪ್ರೆಸ್ಟೀಜ್ ಲೇಕ್ಸೈಡ್ ಹ್ಯಾಬಿಟೆಟ್ ಅಪಾರ್ಟ್ಮೆಂಟ್ನ 17ನೇ ಟವರ್ನ ಫ್ಲ್ಯಾಟ್ನಲ್ಲಿ ನೆಲೆಸಿದ್ದರು. ಮೃತ ಮಾನ್ಯ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.ಆಟವಾಡುವಾಗ ಈಜುಕೊಳಕ್ಕೆ ಬಿದ್ದು ಸಾವು:
ಕರೆಂಟ್ ಶಾಕ್ನಿಂದ ಸಾವು ಶಂಕೆ
ಪುತ್ರಿ ಮಾನ್ಯಳ ಸಾವಿನ ಬಗ್ಗೆ ತಂದೆ ರಾಜೇಶ್ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದಾರೆ. ಈಜುಕೊಳದ ಸಮೀಪದ ವಿದ್ಯುತ್ ತಂತಿ ಬಿದ್ದಿದ್ದು, ಆಟವಾಡುವಾಗ ಮಾನ್ಯ ಆ ವಿದ್ಯುತ್ ತಂತಿ ತುಳಿದು ವಿದ್ಯುತ್ ಪ್ರವಹಿಸಿ ಈಜುಕೊಳಕ್ಕೆ ಬಿದ್ದು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಸದ್ಯಕ್ಕೆ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಮಾನ್ಯಳ ಮೃತದೇಹದ ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ. ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.