ಟೆಕಿಗೆ ₹2.41 ಲಕ್ಷ ಟೋಪಿ; ಆರಂಭದಲ್ಲಿ ಅಲ್ಪ ಪ್ರಮಾಣದ ಲಾಭ ತೋರಿಸಿ ಬಳಿಕ ಮೋಸ

KannadaprabhaNewsNetwork |  
Published : May 10, 2024, 01:36 AM ISTUpdated : May 10, 2024, 04:50 AM IST
ಸೈಬರ್‌ ಕ್ರೈಂ | Kannada Prabha

ಸಾರಾಂಶ

ಟೆಲಿಗ್ರಾಂ ಆ್ಯಪ್‌ನಲ್ಲಿ ಟಾಸ್ಕ್‌ ನೀಡಿ ಅಧಿಕ ಲಾಭದ ಆಸೆ ತೋರಿಸಿ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರಿಗೆ ₹2.41 ಲಕ್ಷ ವಂಚಿಸಿರುವ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 ಬೆಂಗಳೂರು : ಟೆಲಿಗ್ರಾಂ ಆ್ಯಪ್‌ನಲ್ಲಿ ಟಾಸ್ಕ್‌ ನೀಡಿ ಅಧಿಕ ಲಾಭದ ಆಸೆ ತೋರಿಸಿ ಸಾಫ್ಟ್‌ವೇರ್‌ ಎಂಜಿನಿಯರೊಬ್ಬರಿಗೆ ₹2.41 ಲಕ್ಷ ವಂಚಿಸಿರುವ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಹೊಸರೋಡ್‌ ನಾಗನಾಥಪುರ ನಿವಾಸಿ ಶ್ರೀಧರಸ್ವಾಮಿ (29) ವಂಚನೆಗೆ ಒಳಗಾದವರು. ಇವರು ನೀಡಿದ ದೂರಿನ ಮೇರೆಗೆ ಪೊಲೀಸರು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ದೂರುದಾರ ಶ್ರೀಧರಸ್ವಾಮಿಗೆ ಮೇ 3ರಂದು ಅಪರಿಚಿತ ನಂಬರ್‌ನಿಂದ ವಾಟ್ಸಾಪ್‌ಗೆ ಲಿಂಕ್‌ವೊಂದು ಬಂದಿದೆ. ಬಳಿಕ ಆ ಲಿಂಕ್‌ ತೆರೆದು ಟೆಲಿಗ್ರಾಂ ಗ್ರೂಪ್‌ಗೆ ಸೇರಿದ್ದಾರೆ. ಬಳಿಕ ಅಪರಿಚಿತ ವ್ಯಕ್ತಿಯು ಟೆಲಿಗ್ರಾಂ ಐಡಿ ಮೂಲಕ ಟಾಸ್ಕ್‌ ನೀಡಿದ್ದಾರೆ. ಶ್ರೀಧರಾಸ್ವಾಮಿ ಆ ಟಾಸ್ಕ್‌ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸ್ವಲ್ಪ ಲಾಭ ಬಂದಿದೆ. ನಂತರ ಹೆಚ್ಚಿನ ಲಾಭದ ಆಸೆಗೆ ತಮ್ಮ ಬ್ಯಾಂಕ್‌ ಖಾತೆಯಿಂದ ಅಪರಿಚಿತ ವ್ಯಕ್ತಿ ಕಳುಹಿಸಿದ್ದ ಲಿಂಕ್‌ನಲ್ಲಿನ ಬ್ಯಾಂಕ್‌ ಖಾತೆಗೆ ₹2.41 ಲಕ್ಷ ವರ್ಗಾಯಿಸಿದ್ದಾರೆ.

ಆದರೆ, ಯಾವುದೇ ಲಾಭವೂ ಬಂದಿಲ್ಲ. ಅಪರಿಚಿತ ವ್ಯಕ್ತಿಗೆ ಕರೆ ಮಾಡಿದರೆ, ಕರೆ ಸ್ವೀಕರಿಸಿಲ್ಲ. ಬಳಿಕ ತಾನು ಸೈಬರ್‌ ವಂಚನೆಗೆ ಒಳಗಾಗಿರುವುದು ಅರಿವಿಗೆ ಬಂದಿದೆ. ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಲಿಸಿಕೊಂಡು ಸೈಬರ್‌ ವಂಚಕರ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌