3 ಪೆಡ್ಲರ್‌ಗಳ ಸೆರೆ: ₹90 ಲಕ್ಷದ ಡ್ರಗ್ಸ್‌ ಜಪ್ತಿ

KannadaprabhaNewsNetwork |  
Published : Mar 02, 2024, 01:47 AM ISTUpdated : Mar 02, 2024, 10:01 AM IST
ಡ್ರಗ್ಸ್‌... | Kannada Prabha

ಸಾರಾಂಶ

ನಗರದಲ್ಲಿ ಡ್ರಗ್ಸ್ ದಂಧೆಕೋರರ ಮೇಲೆ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಮೂವರನ್ನು ಯಲಹಂಕ ಉಪನಗರ ಹಾಗೂ ಸಂಪಂಗಿರಾಮನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ನಗರದಲ್ಲಿ ಡ್ರಗ್ಸ್ ದಂಧೆಕೋರರ ಮೇಲೆ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಮೂವರನ್ನು ಯಲಹಂಕ ಉಪನಗರ ಹಾಗೂ ಸಂಪಂಗಿರಾಮನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

ನೈಜೀಯಾ ದೇಶದ ಜೋಸೆಫ್‌, ಬ್ಯಾರಿ ಹಾಗೂ ಲಗ್ಗೆರೆಯ ಕಿಶನ್‌ ರಾಮ್ ಬಂಧಿತರಾಗಿದ್ದು, ಆರೋಪಿಗಳಿಂದ ₹90 ಲಕ್ಷ ಮೌಲ್ಯದ ಡ್ರಗ್ಸನ್ನು ಜಪ್ತಿ ಮಾಡಲಾಗಿದೆ. ಮಿಷನ್ ರಸ್ತೆ ಹಾಗೂ ವೀರಸಾಗರದ ಜಾರಕಬಂಡೆ ಕಾವಲು ಮುಖ್ಯ ರಸ್ತೆಯ ಡ್ರಗ್ಸ್ ಮಾರಾಟಕ್ಕೆ ಆರೋಪಿಗಳು ಯತ್ನಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಆರು ತಿಂಗಳ ಹಿಂಸೆ ಬ್ಯುಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ ನೈಜೀರಿಯಾ ಜೋಸೆಫ್ ಹಾಗೂ ಬ್ಯಾರಿ, ಬಳಿಕ ಯಲಹಂಕ ಉಪನಗರ ಸಮೀಪದ ಎಂ.ಎಸ್.ಪಾಳ್ಯದಲ್ಲಿ ನೆಲೆಸಿದ್ದರು. ವಿದೇಶ ಡ್ರಗ್ಸ್ ಮಾಫಿಯಾ ಮೂಲಕ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿ ನಗರದಲ್ಲಿ ದುಬಾರಿ ಬೆಲೆಗೆ ಅವರು ಮಾರಾಟ ಮಾಡುತ್ತಿದ್ದರು. 

ಈ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು, ವೀರಸಾಗರದ ಜಾರಕಬಂಡೆ ಕಾವಲು ಮುಖ್ಯರಸ್ತೆ ಬಳಿ ಗ್ರಾಹಕರಿಗೆ ಡ್ರಗ್ಸ್ ಮಾರಾಟ ಮಾಡುವ ವೇಳೆ ದಾಳಿ ನಡೆಸಿದ್ದಾರೆ. 

ಈ ವಿದೇಶಿ ಪೆಡ್ಲರ್‌ಗಳಿಂದ 1.025 ಕೇಜಿ ಕೊಕೇನ್ ಹಾಗೂ 50 ಗ್ರಾಂ ತೂಕದ ಎಂಡಿಎಂಎ ಕ್ರಿಸ್ಟೇಲ್‌ ಸೇರಿ ₹67.5 ಲಕ್ಷ ಮೌಲ್ಯ ಡ್ರಗ್ಸ್ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಎಲೆಕ್ಟ್ರಿಕಲ್‌ ವ್ಯಾಪಾರಿ

ಮಿಷನ್‌ ರಸ್ತೆಯಲ್ಲಿ ಎಸ್‌ಎಸ್‌ ನಗರ ಠಾಣೆ ಪೊಲೀಸರ ಬಲೆಗೆ ಮತ್ತೊಂದು ಪೆಡ್ಲರ್‌ ಬಿದ್ದಿದ್ದಾನೆ. ಲಗ್ಗೆರೆ ನಿವಾಸಿ ಕಿಶನ್ ರಾಮ್‌ ಬಂಧಿತನಾಗಿದ್ದು, ಆರೋಪಿಯಿಂದ ₹3.5 ಲಕ್ಷ ಮೌಲ್ಯದ ಆಫೀಮು ಜಪ್ತಿ ಮಾಡಲಾಗಿದೆ. 

ರಾಜಸ್ಥಾನ ಮೂಲದ ಕಿಶನ್‌, ಈ ಮೊದಲು ನಗರದಲ್ಲಿ ಎಲೆಕ್ಟ್ರಿಕಲ್‌ ಅಂಗಡಿ ಇಟ್ಟುಕೊಂಡಿದ್ದ. ಆದರೆ ಸುಲಭವಾಗಿ ಹಣ ಸಂಪಾದನೆಗೆ ಆತ ಡ್ರಗ್ಸ್ ದಂಧೆಗಳಿಗಿದ್ದ.

ಇತ್ತೀಚಿಗೆ ಮಿಷನ್ ರಸ್ತೆಯ ಕೆನರಾ ಬ್ಯಾಂಕ್ ಬಳಿ ಗಸ್ತು ಮಾಡುತ್ತಿದ್ದಾಗ ಶಂಕೆ ಮೇರೆಗೆ ಕಿಶನ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಡ್ರಗ್ಸ್ ಮಾರಾಟ ಕೃತ್ಯ ಬೆಳಕಿಗೆ ಬಂದಿದೆ. 

ತಾನು ರಾಜಸ್ಥಾನದಿಂದ ಆಫೀಮು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದಾಗಿ ವಿಚಾರಣೆ ವೇಳೆ ಆರೋಪಿ ಬಾಯ್ಬಿಟ್ಟಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಟೆಕ್ಕಿ ಮನೇಲಿ 3 ಕೋಟಿ ವಜ್ರ ದೋಚಿದವ ಅಂದರ್‌
ಮಹಿಳೆ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತು ಪರಾರಿ: ಐವರು ಆರೋಪಿಗಳ ಬಂಧನ