ಬೆತ್ತಲೆ ಕೇಸ್‌ ಸಂತ್ರಸ್ತೆಗೆ ₹5 ಲಕ್ಷ ಪರಿಹಾರ

KannadaprabhaNewsNetwork |  
Published : Dec 16, 2023, 02:00 AM IST

ಸಾರಾಂಶ

ಬೆಳಗಾವಿಯಲ್ಲಿ ಇತ್ತೀಚೆಗೆ ನಡೆದಿರುವ ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆಗೆ ರಾಜ್ಯ ಸರ್ಕಾರವು 5 ಲಕ್ಷ ರುಪಾಯಿ ಪರಿಹಾರ ಘೋಷಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಘೋಷಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಮಹಿಳೆಗೆ ರಾಜ್ಯ ಸರ್ಕಾರದ ವತಿಯಿಂದ ₹5 ಲಕ್ಷ ರು. ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ತಿಳಿಸಿದರು. ವಂಟಮುರಿ ಸಂತ್ರಸ್ತ ಮಹಿಳೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದಲೂ ₹50 ಸಾವಿರ ಪರಿಹಾರ ಕೂಡ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು.

---------ಡಿ.11ರಂದು ಆಕೆಯ ಮಗ ಗ್ರಾಮದ ಹುಡುಗಿಯೊಂದಿಗೆ ಓಡಿಹೋದ ಎಂಬ ಕಾರಣಕ್ಕೆ ಮಹಿಳೆಯನ್ನು ವಿವಸ್ತ್ರಗೊಳಿಸಿ, ಆಕೆಯ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆಯ ಲಾಗಿತ್ತು. ಇನ್ನು, 8 ಆರೋಪಿಗಳನ್ನು ಪ್ರಕರಣ ಸಂಬಂಧ ಬಂಧಿಸಲಾಗಿದ್ದು, ಉಳಿದ ಆರೋಪಿಗಳ ತಲಾಶೆ ನಡೆದಿದೆ. ಹಾಗೆಯೇ, ಘಟನೆಯ ಕುರಿತು ಹೈಕೋರ್ಟ್‌ ಸಹ ಸರ್ಕಾರಕ್ಕೆ ಪ್ರಕರಣದ ಸಂಬಂಧ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ವರದಿ ಕೇಳಿತ್ತು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಮೈಸೂರಲ್ಲಿ ಮತ್ತೊಂದು ಹೈಟೆಕ್‌ ಡ್ರಗ್ಸ್‌ ಫ್ಯಾಕ್ಟರಿ ಪತ್ತೆ
ಕುಡಿದು ಕಾರ್‌ ಓಡಿಸಿ ಅಪಘಾತ : ಮಯೂರ್ ವಿರುದ್ಧ ಕೇಸ್‌