ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಗ್ರಾಮದ ನಿವಾಸಿ ಮಂಜುನಾಥ (51) ಮೃತ ದುರ್ದೈವಿ. ಮಂಜುನಾಥ್ ಬೆಳಗ್ಗೆ ತನ್ನ ಮನೆ ಸಮೀಪವೇ ಇದ್ದ ಜಮೀನಿಲ್ಲಿ ಕೆಲಸ ಮಾಡಲು ಹೊರಟಿದ್ದರು. ಈ ವೇಳೆ ಜಮೀನಿನ ಬಳಿ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು ಇದನ್ನು ಗಮನಿಸದೇ ತುಳಿದು ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಮೃತ ಮಂಜುನಾಥ್ ಪತ್ನಿ ಸೇರಿದಂತೆ ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಸುದ್ದಿ ತಿಳಿದ ಕೂಡಲೇ ಸೆಸ್ಕಾಂ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮೃತದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ರೈತರಿಂದ ಸೆಸ್ಕಾಂ ಅಧಿಕಾರಿಗಳ ವಿರುದ್ಧ ಆಕ್ರೋಶ, ಪರಿಹಾರಕ್ಕೆ ಒತ್ತಾಯ:
ತಾಲೂಕಿನಲ್ಲಿ ವಿದ್ಯುತ್ ಅವಘಡಗಳಿಗೆ ಬಲಿಯಾಗುತ್ತಿರುವವರ ಸಂಖ್ಯೆ ಏರುತ್ತಿದೆ. ಸೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಯಾವುದೇ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯುತ್ ಅವಘಡಕ್ಕೆ ಬಲಿಯಾದ ಕುಟುಂಬಗಳಿಗೆ ಪರಿಹಾರ ನೀಡಿಕೆಯಲ್ಲಿಯೂ ವಿದ್ಯುತ್ ಇಲಾಖೆ ವಿಳಂಬ ಧೋರಣೆ ತಾಳಿದೆ. ಹಳೆಯ ಕಾಲದ ವಿದ್ಯುತ್ ಲೈನುಗಳನ್ನು ಬದಲಿಸಿದ ಕಾರಣ ಅಲ್ಲಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿವೆ. ಇದರ ಅರಿವಿಲ್ಲದೆ ತಂತಿ ತುಳಿದ ಜನ ಮತ್ತು ಜಾನುವಾರುಗಳು ವಿದ್ಯುತ್ ಪ್ರವಹಿಸಿ ಸಾವನ್ನುಪ್ಪುವಂತಾಗಿದೆ ಎಂದು ದೂರಿದರು.
ವೇಳೆ ಗ್ರಾಪಂ ಮಾಜಿ ಅಧ್ಯಕ್ಷ ಚೌಡೇನಹಳ್ಳಿ ನಾಗರಾಜು, ವಕೀಲ ಕುರುಬಳ್ಳಿನಾಗೇಶ್, ಮಂಚನಹಳ್ಳಿ ನಾಗೇಗೌಡ ಇತರರು ಇದ್ದರು.15ಕೆಎಂಎನ್ ಡಿ24