ಕನ್ನಡಪ್ರಭ ವಾರ್ತೆ ಬೆಂಗಳೂರು
ಆಂಧ್ರಪ್ರದೇಶ ರಾಜ್ಯ ಕರ್ನೂಲ್ ಜಿಲ್ಲೆಯ ನಾಗನೂರಿ ಕುಮಾರ್, ಪರಶುರಾಮ್ ಅಲಿಯಾಸ್ ಅಭಿ, ಇವರ ಸಹಚರ ಕಾನೂನು ಸಂಘರ್ಷಕ್ಕೊಳಗಾದ ಬಾಲಕ, ಪೀಣ್ಯ ಸಮೀಪದ ಪಾರ್ವತಿ ನಗರದ ಮಹಮ್ಮದ್ ಫಾರೂಕ್, ಜೆ.ಜೆ.ನಗರದ ಸೈಯದ್ ಪರ್ವೀಜ್, ಸುಧಾಮನಗರದ ಕೆ.ಟಿ.ರೆಹಮಾನ್, ಪುಲಕೇಶಿನಗರದ ಸೈಯದ್ ಜಮೀರ್ ಹಾಗೂ ಮೀನಾಜ್ನಗರದ ಸೈಯದ್ ಹಾಷಿಮ್ ಅಲಿಯಾಸ್ ಖರ್ರುಂ ಬಂಧಿತರಾಗಿದ್ದಾರೆ. ಆರೋಪಿಗಳಿಂದ ₹28.77 ಲಕ್ಷ ಮೌಲ್ಯದ 208 ಮೊಬೈಲ್ಗಳನ್ನು ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಂಧ್ರ ಗ್ಯಾಂಗ್ ಸೆರೆ; 176 ಮೊಬೈಲ್ಗಳು ಜಪ್ತಿ:ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಸೋಗಿನಲ್ಲಿ ತೆರಳಿ ಜನರ ಗಮನ ಬೇರೆಡೆ ಸೆಳೆದು ಮೊಬೈಲ್ ಎಗರಿಸುತ್ತಿದ್ದ ಆಂಧ್ರ ಗ್ಯಾಂಗನ್ನು ಉಪ್ಪಾರಪೇಟೆ ಪೊಲೀಸರು ಗಾಳಕ್ಕೆ ಹಾಕಿದ್ದಾರೆ.
ಕೆಲ ದಿನಗಳ ಹಿಂದೆ ಮೆಜೆಸ್ಟಿಕ್ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಶಿವಮೊಗ್ಗದಿಂದ ನಗರಕ್ಕೆ ಬಂದಿದ್ದ ವ್ಯಕ್ತಿಯೊಬ್ಬರ ಮೊಬೈಲ್ ಕಳ್ಳತನವಾಗಿತ್ತು. ಈ ಬಗ್ಗೆ ತನಿಖೆಗಿಳಿದ ಪೊಲೀಸರು, ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಮೊಬೈಲ್ ಕದ್ದು ಬಿಡಿ ಭಾಗಗಳ ಮಾರಾಟಜನರಿಗೆ ಬೆದರಿಕೆ ಹಾಕಿ ಮೊಬೈಲ್ ದೋಚಿ ಬಳಿಕ ಅವುಗಳ ಬಿಡಿ ಭಾಗಗಳನ್ನು ಮಾರಾಟ ಮಾಡುತ್ತಿದ್ದ ಐವರು ಕಿಡಿಗೇಡಿಗಳು ಚಂದ್ರಾಲೇಔಟ್ ಠಾಣೆ ಪೊಲೀಸರು ಬಲೆ ಬಿದ್ದಿದ್ದಾರೆ. ಕೆಲ ದಿನಗಳ ಹಿಂದೆ ನಾಗರಬಾವಿ ಸಮೀಪದ ಸುವರ್ಣ ಲೇಔಟ್ ರಸ್ತೆಯಲ್ಲಿ ವ್ಯಕ್ತಿಯೊಬ್ಬರಿಗೆ ಬೆದರಿಸಿ ₹1 ಲಕ್ಷ ಮೌಲ್ಯದ ಮೊಬೈಲ್ ದೋಚಿದ್ದರು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು, ಆ ಮೊಬೈಲ್ನಲ್ಲಿದ್ದ ಫೈಂಡ್ ಮೈ ಡಿವೈಸ್ ಆ್ಯಪ್ ಮೂಲಕ ಮೊಬೈಲ್ ಸುಲಿಗೆಕೋರರನ್ನು ಸೆರೆ ಹಿಡಿದರು. ಬಳಿಕ ಈ ಆರೋಪಿಗಳಿಂದ ₹6.31 ಲಕ್ಷ ಮೌಲ್ಯದ 32 ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಯಿತು. ಈ ತಂಡದಿಂದ ಮೂರು ಮೊಬೈಲ್ ಸುಲಿಗೆ ಕೃತ್ಯಗಳು ಪತ್ತೆಯಾಗಿವೆ.