ಕನ್ನಡಪ್ರಭ ವಾರ್ತೆ ಬೆಂಗಳೂರು
ರಾಜರಾಜೇಶ್ವರಿ ನಗರದ ಬಿಇಎಂಎಲ್ 3ನೇ ಹಂತದ ನಿವಾಸಿ ಸಾವಿತ್ರಮ್ಮ (75) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತಳ ಪುತ್ರ ಸಿ. ವೆಂಕಟೇಶ್ ಅಲಿಯಾಸ್ ದಶರಥ್ನನ್ನು ಆರ್.ಆರ್. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತನ್ನ ಮನೆಯ ಮಹಡಿಯಿಂದ ತಾಯಿಯನ್ನು ಮಧ್ಯಾಹ್ನ ಬಿಸಾಡಿ ವೆಂಕಟೇಶ್ ಕೊಂದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.3 ವರ್ಷಗಳಿಂದ ನರಳಿದ ತಾಯಿ
ಇದೇ ಯಾತನೆಯಲ್ಲೇ ಮಾತೃ ಹತ್ಯೆಗೆ ವೆಂಕಟೇಶ್ ನಿರ್ಧರಿಸಿದ್ದಾನೆ. ಅಂತೆಯೇ ಮಧ್ಯಾಹ್ನ ಮನೆಯಿಂದ ಹೊರಗೆ ಎತ್ತಿಕೊಂಡು ಹೋಗಿ ಮಹಡಿಯಿಂದ ತಾಯಿಯನ್ನು ಆತ ಎಸೆದಿದ್ದಾನೆ. ಕೆಳಗೆ ಬಿದ್ದ ಸಾವಿತ್ರಮ್ಮ ಗಂಭೀರ ಸ್ವರೂಪವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಾವಿತ್ರಮ್ಮ ಚೀರಾಟ ಕೇಳಿ ಸ್ಥಳೀಯರು ಜಮಾಯಿಸಿದ್ದಾರೆ. ಕೂಡಲೇ ಪೊಲೀಸ್ ನಿಯಂತ್ರಣ ಕೊಠಡಿ (ನಮ್ಮ-112)ಗೆ ಕರೆ ಮಾಡಿ ಘಟನೆ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ. ಈ ಮಾಹಿತಿ ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ. ಬಳಿಕ ಮನೆ ಮಾಲಿಕರ ದೂರು ಆಧರಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮೃತರ ಪುತ್ರ ವೆಂಕಟೇಶ್ನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.
ಮೂರು ವರ್ಷಗಳಿಂದ ತಾಯಿ ಹಾಸಿಗೆ ಹಿಡಿದಿದ್ದಳು. ಬಹಳಷ್ಟು ವೈದ್ಯರ ಬಳಿ ಚಿಕಿತ್ಸೆ ಕೊಡಿಸಿದೆ. ಆದರೆ ಆಕೆ ಸುಧಾರಿಸಲಿಲ್ಲ. ಪ್ರತಿ ದಿನ ಅಮ್ಮ ಕಷ್ಟಪಡುವುದು ನೋಡಲು ಸಂಕಟವಾಗುತ್ತಿತ್ತು. ಆ ಯಾತನಮಯ ಬದುಕಿಗೆ ತಾಯಿಗೆ ಮುಕ್ತಿ ಕೊಡಲು ನಿರ್ಧರಿಸಿದೆ ಎಂದು ವಿಚಾರಣೆ ವೇಳೆ ಆರೋಪಿ ವೆಂಕಟೇಶ್ ಹೇಳಿಕೆ ಕೊಟ್ಟಿರುವುದಾಗಿ ತಿಳಿದು ಬಂದಿದೆ.