ಬೆಂಗಳೂರು : ‘ನೀನು ಸಲಿಂಗಿಯಾ’ ಪ್ರಶ್ನೆಗೆ ಉತ್ತರ ನೀಡದವಗೆ ಹಲ್ಲೆ ಮಾಡಿದ ಅಪರಿಚಿತ

KannadaprabhaNewsNetwork |  
Published : Jan 17, 2025, 01:45 AM ISTUpdated : Jan 17, 2025, 04:24 AM IST
ಬಾರ್‌ | Kannada Prabha

ಸಾರಾಂಶ

ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ವೊಂದರ ಶೌಚಾಲಯದಲ್ಲಿ ಅಪರಿಚಿತ ವ್ಯಕ್ತಿ ‘ನೀನು ಗೇ ನಾ’ ಎಂದು ಪ್ರಶ್ನಿಸಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

 ಬೆಂಗಳೂರು : ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ವೊಂದರ ಶೌಚಾಲಯದಲ್ಲಿ ಅಪರಿಚಿತ ವ್ಯಕ್ತಿ ‘ನೀನು ಗೇ ನಾ’ ಎಂದು ಪ್ರಶ್ನಿಸಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬ್ರಿಗೇಡ್‌ ರಸ್ತೆಯ ಪ್ಯಾಂಜೋ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನಲ್ಲಿ ಜ.10ರ ರಾತ್ರಿ ಈ ಘಟನೆ ನಡೆದಿದೆ. ಕಾಕ್ಸ್‌ಟೌನ್‌ ನಿವಾಸಿ ವಿನಯ್‌ ರೂಪಾನಿ (23) ಹಲ್ಲೆಗೆ ಒಳಗಾದವರು. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

ಏನಿದು ಘಟನೆ?:

ದೂರುದಾರ ವಿನಯ್‌ ರೂಪಾನಿ ಜ.10ರಂದು ರಾತ್ರಿ ಸುಮಾರು 10 ಗಂಟೆಗೆ ತನ್ನ ಇಬ್ಬರು ಸ್ನೇಹಿತೆಯರ ಜತೆಗೆ ಬ್ರಿಗೇಡ್‌ ರಸ್ತೆಯ ಪ್ಯಾಂಜೋ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ಗೆ ಊಟಕ್ಕೆ ತೆರಳಿದ್ದರು. ಊಟ ಮುಗಿಸಿದ ಬಳಿಕ ವಿನಯ್‌ ಶೌಚಾಲಯಕ್ಕೆ ತೆರಳಿದ್ದಾರೆ. ಈ ವೇಳೆ ಅಲ್ಲೇ ಇದ್ದ ಅಪರಿಚಿತ ವ್ಯಕ್ತಿ ವಿನಯ್‌ ಹತ್ತಿರಕ್ಕೆ ಬಂದು ‘ನೀನು ಗೇನಾ’ ಎಂದು ಪ್ರಶ್ನಿಸಿದ್ದಾನೆ. ಇದಕ್ಕೆ ವಿನಯ್‌ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ವೇಳೆ ಆ ಅಪರಿಚಿತ ವ್ಯಕ್ತಿ ವಿನಯ್‌ನನ್ನು ಅಡ್ಡಗಟ್ಟಿ ನೀನು ಗೇನಾ ಎಂದು ಹಲವು ಬಾರಿ ಪ್ರಶ್ನಿಸಿದ್ದಾನೆ.

ತಲೆಗೆ ಹಲ್ಲೆ:

ಆಗಲೂ ವಿನಯ್‌ ಯಾವುದೇ ಪ್ರತಿಕ್ರಿಯೆ ನೀಡದೆ ಮುಂದೆ ಹೋಗಲು ಪ್ರಯತ್ನಿಸಿದ್ದಾರೆ. ಈ ವೇಳೆ ಅಪರಿಚಿತ ವ್ಯಕ್ತಿ ವಿನಯ್‌ ತಲೆ ಮೇಲೆ ಎರಡು ಬಾರಿ ಹೊಡೆದಿದ್ದಾನೆ. ಬಳಿಕ ಗೆಳೆತಿಯರ ಬಳಿ ಬಂದಿರುವ ವಿನಯ್‌, ಶೌಚಾಲಯದಲ್ಲಿ ನಡೆದ ಘಟನೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ವೇಳೆ ಗೆಳತಿಯರು ಪೊಲೀಸ್‌ ಸಹಾಯವಾಣಿಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬರುವ ಮುನ್ನವೇ ಆ ಅಪರಿಚಿತ ವ್ಯಕ್ತಿ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ನಿಂದ ಪರಾರಿಯಾಗಿದ್ದಾನೆ.

ಈ ಸಂಬಂಧ ವಿನಯ್‌ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿರುವ ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು, ಅಪರಿಚಿತ ವ್ಯಕ್ತಿಯ ಪತ್ತೆಗೆ ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಕರ್ತವ್ಯ ಲೋಪ, ಭ್ರಷ್ಟಾಚಾರದ ಆರೋಪ; ವಿಚಾರಣೆಗೆ ಅಧಿಕಾರಿಗಳ ನೇಮಕ
ಶ್ರೀರಂಗಪಟ್ಟಣ: ಕುಡಿದ ಮತ್ತಿನಲ್ಲಿದ್ದ ಸ್ನೇಹಿತನ ಕೊಲೆ