ಕೊಂಬೆ ಬಿದ್ದು ತಲೆ 12 ಹೋಳಾಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಯುವಕ ಸಾವು

KannadaprabhaNewsNetwork |  
Published : Jun 20, 2025, 12:35 AM ISTUpdated : Jun 20, 2025, 06:27 AM IST
Road Accident

ಸಾರಾಂಶ

ಬೈಕ್‌ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅಕ್ಷಯ್‌ (29) ಗುರುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

 ಬೆಂಗಳೂರು :  ಬೈಕ್‌ನಲ್ಲಿ ಚಲಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅಕ್ಷಯ್‌ (29) ಗುರುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಕಳೆದ ಭಾನುವಾರ ಮಧ್ಯಾಹ್ನ 1.15ರ ಸುಮಾರಿಗೆ ಶ್ರೀನಗರದ ನಿವಾಸಿ ಅಕ್ಷಯ್‌ (29) ಬನಶಂಕರಿಯ ಬ್ರಹ್ಮ ಚೈತನ್ಯ ಮಂದಿರದ ಬಳಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಏಕಾಏಕಿ ಮರದ ಕೊಂಬೆ ಬಿದ್ದು ತಲೆಗೆ ಪೆಟ್ಟಾಗಿ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ತಕ್ಷಣ ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ಮಾಡಿ ತೀವ್ರ ನಿಗಾ ಘಟಕದಲ್ಲಿ ಕಳೆದ ನಾಲ್ಕು ದಿನದಿಂದ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ, ಗುರುವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆಂದು ವೈದ್ಯರು ದೃಢಪಡಿಸಿದರು.

ಪಾಲಿಕೆಯಿಂದ ಚಿಕಿತ್ಸೆ ವೆಚ್ಚ ಮತ್ತು ಪರಿಹಾರ

ಕಳೆದ ನಾಲ್ಕು ದಿನದಿಂದ ಚಿಕಿತ್ಸೆ ವೆಚ್ಚ ಸುಮಾರು 4 ಲಕ್ಷ ರು.ಗಳನ್ನು ಆಸ್ಪತ್ರೆಗೆ ಬಿಬಿಎಂಪಿಯಿಂದ ಪಾವತಿ ಮಾಡಲಾಗಿದೆ. ಮೃತ ಅಕ್ಷಯ್‌ ಕುಟುಂಬಕ್ಕೆ ಬಿಬಿಎಂಪಿಯಿಂದ ಐದು ಲಕ್ಷ ರು. ಪರಿಹಾರ ನೀಡಲಾಗುವುದು ಎಂದು ಬಿಬಿಎಂಪಿಯ ಅಧಿಕಾರಿಗಳು ತಿಳಿಸಿದ್ದಾರೆ.

ಅಕ್ಷಯ್‌ ನೇತ್ರದಾನಮೃತ ಅಕ್ಷಯ್ ಕುಟುಂಬಸ್ಥರು, ಅಕ್ಷಯ್​ನ ಎರಡು ಕಣ್ಣುಗಳನ್ನು ಕಿಮ್ಸ್ ಆಸ್ಪತ್ರೆಗೆ ದಾನ ನೀಡಿದ್ದಾರೆ. ಈ ಮೂಲಕ ಸಾವಿನಲ್ಲೂ ಅಕ್ಷಯ್ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ಕೊಲೆ ಅಂತ್ಯ
ಪೊಲೀಸ್‌ ಠಾಣೆ ಸಮೀಪ ಪಾನಮತ್ತ ದಂಪತಿಯ ರಂಪಾಟ