ಗಾಂಜಾ ನಶೆಯಲ್ಲಿದ್ದ ಪುಂಡರಿಂದ ರಸ್ತೆಯಲ್ಲೇ ಯುವತಿಗೆ ಕಿರುಕುಳ

KannadaprabhaNewsNetwork |  
Published : Jun 24, 2025, 01:47 AM ISTUpdated : Jun 24, 2025, 05:25 AM IST
KSRP

ಸಾರಾಂಶ

ಗಾಂಜಾ ನಶೆಯಲ್ಲಿದ್ದ ಐವರು ಪುಂಡರು ಅಂಗಡಿಗೆ ಹೊರಟಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರು ತಾಲೂಕಿನ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

 ಆನೇಕಲ್ :  ಗಾಂಜಾ ನಶೆಯಲ್ಲಿದ್ದ ಐವರು ಪುಂಡರು ಅಂಗಡಿಗೆ ಹೊರಟಿದ್ದ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರು ತಾಲೂಕಿನ ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಮೈಲಸಂದ್ರ ಬಳಿಯ ರೇಣುಕಾ ಯಲ್ಲಮ್ಮ ಬಡಾವಣೆಯಲ್ಲಿ ನಡೆದಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.

ರಿಚರ್ಡ್ (24) ಮತ್ತು ಅಂಥೋನಿ (52) ಬಂಧಿತರು. ಸಂತ್ರಸ್ತ ಯುವತಿ ಮನೆಗೆ ಬೇಕಾದ ವಸ್ತುಗಳನ್ನು ತರಲು ಸಂಜೆ ಅಂಗಡಿಗೆ ಹೊರಟಿದ್ದರು. ಈ ವೇಳೆ ಗಾಂಜಾ ನಶೆಯಲ್ಲಿದ್ದ 5 ಜನರ ಗುಂಪು ಪುಂಡರು ಆಕೆಯನ್ನು ಗಮನಿಸಿ ಚುಡಾಯಿಸಿದ್ದು, ಅಶ್ಲೀಲವಾಗಿ ಸನ್ನೆ ಮಾಡಿ ಕರೆದು ಹಾಡಹಗಲೇ ನಡು ರಸ್ತೆಯಲ್ಲಿ ಮೈ ಕೈ ಮುಟ್ಟಿ ಅಸಭ್ಯ ತೋರಿದ್ದಾರೆ. ಪ್ರತಿರೋಧ ವ್ಯಕ್ತಪಡಿಸಿದಾಗ ಆಕೆಯ ಮೇಲೆ ಹಲ್ಲೆ ಪ್ರಯತ್ನವನ್ನೂ ನಡೆಸಿದ್ದಾರೆ. ಈ ಬಗ್ಗೆ ಯುವತಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಕಿರುಕುಳ ನೀಡುವಾಗ ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡು ಬಂದರೂ ಮನೆಗೆ ನುಗ್ಗಿ ಗಲಾಟೆ ಮಾಡಿದ್ದಾರೆ. ಅಲ್ಲದೇ, ನೆರವಿಗೆ ಧಾವಿಸಿದ ಸ್ಥಳೀಯರ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಗಲಾಟೆಯಾದ ವೇಳೆ ಮಹಿಳೆಗೆ ಅಲ್ಪಸ್ವಲ್ಪ ಗಾಯಗಳು ಆಗಿದ್ದು ಮರುದಿನ ಬೆಳಗ್ಗೆ ದೂರು ನೀಡಿದ್ದಾರೆ. ಹಲ್ಲೆ ಮತ್ತು ದೌರ್ಜನ್ಯದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಳಿದ ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಬನ್ನೇರುಘಟ್ಟ ಠಾಣೆ ಇನ್‌ಸ್ಪೆಕ್ಟರ್ ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಡಿವೈಎಸ್ಪಿ ಮೋಹನ್ , ಇನ್ಸ್‌ಪೆಕ್ಟರ್‌ ಕೃಷ್ಣಕುಮಾರ್‌ ಭೇಟಿ ನೀಡಿ ಪರಿಶೀಲಿಸಿದ್ದು, ದೂರು ಆಧರಿಸಿ ವಿಚಾರಣೆ ನಡೆಸಿ ತಪ್ಪಿತಸ್ತರ ಮೇಲೆ ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ. ಈ ವೇಳೆ ಅಡಿಶನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಇದ್ದರು.-ರಿಚರ್ಡ್ (24) ಮತ್ತು ಅಂಥೋನಿ (52) ಬಂಧಿತರು-ಮೂವರು ನಾಪತ್ತೆಯಾಗಿದ್ದು ಬಲಿ ಬೀಸಿದ ಪೊಲೀಸ್‌-ಆಕೆಗೆ ಅಶ್ಲೀಲವಾಗಿ ಸನ್ನೆ ಮಾಡಿ ಕರೆದು ಅಸಭ್ಯ ವರ್ತನೆ-ಪ್ರತಿರೋಧ ತೋರಿದಾಗ ಆಕೆ ಮೇಲೆ ಪುಂಡರಿಂದ ಹಲ್ಲೆ - ಸ್ಥಳೀಯರ ನೆರವಿನಿಂದ ತಪ್ಪಿಸಿಕೊಂಡು ಬಂದರೂ ಮನೆಗೆ ನುಗ್ಗಿ ಗಲಾಟೆ-ಅಲ್ಲದೇ, ನೆರವಿಗೆ ಬಂದ ಸ್ಥಳೀಯರ ಮೇಲೂ ಹಲ್ಲೆ ಆರೋಪ

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ಕೊಲೆ ಅಂತ್ಯ
ಪೊಲೀಸ್‌ ಠಾಣೆ ಸಮೀಪ ಪಾನಮತ್ತ ದಂಪತಿಯ ರಂಪಾಟ