ಮತ್ತೊಂದು ಇರಿತ ಘಟನೆ : ಬಂಟ್ವಾಳ ಬಳಿ ವ್ಯಕ್ತಿಗೆ ಇರಿತ

Sujatha NRPublished : May 17, 2025 7:59 AM

ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ.

ಬಂಟ್ವಾಳ: ಇತ್ತೀಚೆಗೆ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಬಳಿಕ ಮತ್ತೊಂದು ಇರಿತ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್‌ ನಿಲ್ದಾಣ ಬಳಿ ಒಂದು ಕೋಮಿನ ಯುವಕನಿಗೆ 4 ಮಂದಿಯ ತಂಡ ಚೂರಿಯಿಂದ ಇರಿದು ಪರಾರಿ ಆಗಿದೆ.

ಇರಿತಕ್ಕೆ ಒಳಗಾದವರನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ಗುರುತಿಸಲಾಗಿದೆ. ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ನೈಜಕಾರಣ ಏನು ಎಂಬುದು ಪೊಲೀಸ್ ತನಿಖೆಯಿಂದ ತಿಳಿದುಬರಬೇಕಿದೆ.

Read more Articles on