ಕನ್ನಡಪ್ರಭ ವಾರ್ತೆ ಬೆಂಗಳೂರು
ಆರ್.ಎಂ.ವಿ 2ನೇ ಹಂತದ ನಿವಾಸಿ ದೇವರಾಜ್ (43) ಮೃತ ದುರ್ದೈವಿ. ಈ ಅಪಘಾತದ ಬಳಿಕ ತಪ್ಪಿಸಿಕೊಂಡಿರುವ ಆಟೋ ಚಾಲಕನ ಪತ್ತೆಗೆ ತನಿಖೆ ನಡೆದಿದೆ. ನಾಗಶೆಟ್ಟಿಹಳ್ಳಿ ಕಡೆಯಿಂದ ಭೂಪಸಂದ್ರಕ್ಕೆ ಶುಕ್ರವಾರ ರಾತ್ರಿ ದೇವರಾಜ್ ತೆರಳುವಾಗ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ತಮ್ಮ ಕುಟುಂಬದ ಜತೆ ಆರ್.ಎಂ.ವಿ 2ನೇ ಹಂತದಲ್ಲಿ ದೇವರಾಜ್ ನೆಲೆಸಿದ್ದರು. ಭೂಪಸಂದ್ರದಿಂದ ನಾಗಶೆಟ್ಟಿಹಳ್ಳಿ ಕಡೆಗೆ ತೆರಳುತ್ತಿದ್ದ ಅಪೆ ಆಟೋವನ್ನು ಅತಿವೇಗವಾಗಿ ಚಲಾಯಿಸಿಕೊಂಡು ಚಾಲಕ ಬಂದಿದ್ದ. ಅದೇ ವೇಳೆ ನಾಗಶೆಟ್ಟಿಹಳ್ಳಿಯಿಂದ ಭೂಪಸಂದ್ರಕ್ಕೆ ಬರುತ್ತಿದ್ದ ಬೈಕ್ಗೆ ಆಟೋ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡು ದೇವರಾಜ್ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರ್.ಟಿ.ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕಿಂದ ಕೆಳಗೆ ಬಿದ್ದವಳ
ಕನ್ನಡಪ್ರಭ ವಾರ್ತೆ ಬೆಂಗಳೂರುದ್ವಿಚಕ್ರ ವಾಹನಕ್ಕೆ ಹಿಂದಿನಿಂದ ಲಾರಿ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಮಹಿಳೆ ದೇಹದ ಮೇಲೆಯೇ ಲಾರಿಯ ಚಕ್ರಗಳು ಉರುಳಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹೆಬ್ಬಾಳ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಕಾರಣವಾದ ಲಾರಿಯನ್ನು ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ. ಹೆಬ್ಬಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.