ಕನ್ನಡಪ್ರಭ ವಾರ್ತೆ ಬೆಂಗಳೂರು
ಬಂಧಿತ ಪ್ರಯಾಣಿಕನಿಂದ ಸುಮಾರು ₹17.23 ಲಕ್ಷ ಮೌಲ್ಯದ 279 ಗ್ರಾಂ ತೂಕದ ಚಿನ್ನ ಜಪ್ತಿ ಮಾಡಲಾಗಿದೆ. ಗುರುವಾರ ಕುವೈತ್ನಿಂದ ಕೆಐಎ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದರು. ಈ ವೇಳೆ ಪ್ರಯಾಣಿಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸಿದ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದು ಲಗೇಜ್ ತಪಾಸಣೆ ಮಾಡಿದಾಗ, ಬರ್ನರ್ ಕಂಟೈನರ್ನೊಳಗೆ ಚಿನ್ನದ ತಂಡುಗಳನ್ನು ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ಸಂಬಂಧ ಪ್ರಕರಣ ದಾಖಲಿಸಿರುವ ಕಸ್ಟಮ್ಸ್ ಅಧಿಕಾರಿಗಳು, ತನಿಖೆ ಮುಂದುವರೆಸಿದ್ದಾರೆ.ಬಿಎಂಟಿಸಿ ಬಸ್ ನಿಲ್ದಾಣಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್: ದಂಡ
ಕನ್ನಡಪ್ರಭ ವಾರ್ತೆ ಬೆಂಗಳೂರುನಗರದ ಬಿಎಂಟಿಸಿ ಬಸ್ ನಿಲ್ದಾಣಗಳ ಬಳಿ ವಿಶೇಷ ಕಾರ್ಯಾಚರಣೆ ನಡೆಸಿದ ನಗರ ಸಂಚಾರ ಪೊಲೀಸರು, ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡಿ ನಿಯಮ ಉಲ್ಲಂಘಿಸಿದ 456 ವಾಹನಗಳ ವಿರುದ್ಧ ಪ್ರಕರಣ ದಾಖಲಿಸಿ ₹2.54 ಲಕ್ಷ ದಂಡ ವಸೂಲಿ ಮಾಡಿದ್ದಾರೆ.
ಈ ವಿಶೇಷ ಕಾರ್ಯಾಚರಣೆ ಮುಂದುವರೆಯಲಿದ್ದು, ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ.