ಕನ್ನಡಪ್ರಭ ವಾರ್ತೆ ಮದ್ದೂರು
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಈಡಿಗರ ರಸ್ತೆಯ ಸೈಯದ್ ಮುಸ್ತಾಪ್ ಅಹಮದ್ ಪುತ್ರ ಸೈಯದ್ ಯಾಮಿನ್ (24) ನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದ್ದಾರೆ.
ಮೊಬೈಲ್ ವ್ಯಾಪಾರಿಯಾದ ಸೈಯದ್ ಪ್ರತಿಷ್ಠಿತ ಕಂಪನಿಗಳ ಮೊಬೈಲ್ಗಳನ್ನು ಮೈಸೂರಿನ ಮೊಬೈಲ್ ವ್ಯಾಪಾರಿಗಳಿಗೆ ಕಡಿಮೆ ದರದಲ್ಲಿ ಮಾರಾಟ ಮಾಡುವ ವೃತ್ತಿ ನಡೆಸುತ್ತಿದ್ದನು ಎಂದು ಹೇಳಲಾಗಿದೆ.ಕಡಿಮೆ ದರದಲ್ಲಿ ಮೊಬೈಲ್ ಮಾರಾಟ ಮಾಡುತ್ತಿದ್ದ ಈತನಿಗೆ ವ್ಯಾಪಾರದಲ್ಲಿ ಲಕ್ಷಾಂತರ ರು. ನಷ್ಟ ಉಂಟಾಗಿತ್ತು. ಅಲ್ಲದೇ, ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಸಹ ಹಣ ಕಳೆದುಕೊಂಡಿದ್ದ ಸೈಯದ್ ತನ್ನ ತಾಯಿಯಿಂದ ಒಂದು ಲಕ್ಷ ರು. ಸಾಲ ಪಡೆದಿದ್ದನು. ಅಲ್ಲದೇ, ತನ್ನ ಬ್ಯಾಂಕ್ನ ಕ್ರೆಡಿಟ್ ಕಾರ್ಡ್ ಗಳ ಮೂಲಕ ಸಾಲ ಪಡೆದಿದ್ದ ಈತ ದರೋಡೆ ನೆಪದಲ್ಲಿ ಹಣ ಕಳೆದುಕೊಂಡಿದ್ದೇನೆ ಎಂದು ಬಿಂಬಿಸಲು ಸಂಚು ರೂಪಿಸಿದ್ದನು.
ನಂತರ ಸ್ಥಳಕ್ಕೆ ಧಾವಿಸಿದ ಸಿಪಿಐ ಕೆ.ಆರ್.ಪ್ರಸಾದ್ ಸೈಯ್ಯದ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ದರೋಡೆ ನಡೆದಿರುವುದು ಸುಳ್ಳು. ಈತನೇ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಲು ಇಂತಹ ಕಥೆ ಕಟ್ಟಿದ್ದಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ. ಸೈಯದ್ ಯಾಮಿನ್ ನಿಂದ ಪೊಲೀಸರು ಮುಚ್ಚಳಿಕೆ ಬರೆಸಿ ಕೊಂಡ ನಂತರ ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ್ದಾರೆ.