ಕನ್ನಡಪ್ರಭ ವಾರ್ತೆ ಬೆಂಗಳೂರು
ನಾಗರಬಾವಿ ಬೈರವೇಶ್ವರನಗರ ನಿವಾಸಿಗಳಾದ ಮನೀಶ್ ಮೋಹನ್ ಪೂಜಾರಿ (28), ಶಶಿಕುಮಾರ್ ರೆಡ್ಡಿ (20), ಕೃಷ್ಣ (30), ಸತೀಶ್ (44), ಎ. ವೇಣುಗೋಪಾಲ್ ಅಲಿಯಾಸ್ ಕುಮಾರಸ್ವಾಮಿ (51) ಮತ್ತು ಮೈಸೂರು ರಸ್ತೆ ಕಣಿಮಿಣಿಕೆ ಕೆ.ಜಿ.ಗೋವಿಂದರಾಜು(40) ಬಂಧಿತರು.
ಆರೋಪಿಗಳು ಫೆ.29ರಂದು ಕೆಂಗೇರಿ ರೈಲ್ವೆ ಅಂಡರ್ ಪಾಸ್ ಬಳಿ ಕುಂಬಳಗೋಡು ಆರ್ಟಿಐ ಕಾರ್ಯಕರ್ತ ಕೆ.ನಾಗರಾಜ್ ಅವರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದರು. ಈ ಸಂಬಂಧ ದಾಖಲಾದ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಪದೇ ಪದೇ ಅರ್ಜಿ ಹಾಕಿದ್ದಕ್ಕೆ ಕೋಪ:
ಆರೋಪಿ ಗೋವಿಂದರಾಜು ಆರ್ಟಿಐ ಕಾರ್ಯಕರ್ತ ನಾಗರಾಜ್ ಹತ್ಯೆಗೆ ಚಂದ್ರಾಲೇಔಟ್ ಠಾಣೆ ರೌಡಿ ಶೀಟರ್ ಕೃಷ್ಣ ಹಾಗೂ ಆತನ ಗ್ಯಾಂಗ್ಗೆ ₹5 ಲಕ್ಷಕ್ಕೆ ಸುಪಾರಿ ನೀಡಿದ್ದರು. ಮುಂಗಡವಾಗಿ ₹1.50 ಲಕ್ಷ ನೀಡಿದ್ದರು. ಅದರಂತೆ ಫೆ.29ರಂದು ಆರ್ಟಿಐ ಕಾರ್ಯಕರ್ತ ನಾಗರಾಜ್ ಕೆಂಗೇರಿಯ ರೈಲ್ವೆ ಅಂಡರ್ ಪಾಸ್ ಬಳಿ ನಡೆದುಕೊಂಡು ಹೋಗುವಾಗ ಆರೋಪಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು.
ಈ ಸಂಬಂಧ ಗಾಯಾಳು ನಾಗರಾಜು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದ ಕೆಂಗೇರಿ ಠಾಣೆ ಇನ್ಸ್ಪೆಕ್ಟರ್ ಬಿ.ಎಂ.ಕೊಟ್ರೇಶಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.