ನೀರಿನ ಟ್ಯಾಂಕ್‌ನಲ್ಲಿ 33 ದಿನದ ಹಸುಗೂಸಿನ ಶವ ಪತ್ತೆ: ಕೊಲೆ?

KannadaprabhaNewsNetwork |  
Published : Nov 07, 2024, 01:18 AM IST

ಸಾರಾಂಶ

ನೀರಿನ ಟ್ಯಾಂಕ್‌ನಲ್ಲಿ 33 ದಿನ ಹಸುಗೂಸಿನ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕನ್ನಡಪ್ರಭ ವಾರ್ತೆ ಆನೇಕಲ್‌

ನೀರಿನ ಟ್ಯಾಂಕ್‌ನಲ್ಲಿ 33 ದಿನ ಹಸುಗೂಸಿನ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಆನೇಕಲ್‌ ಸಮೀಪದ ಇಗ್ಗಲೂರಿನ ನಿವಾಸಿಗಳಾದ ಮನು ಮತ್ತು ಹರ್ಷಿತಾ ದಂಪತಿಯ ಮಗುವಿನ ಶವ ಟ್ಯಾಂಕ್‌ನಲ್ಲಿ ಸಿಕ್ಕಿದೆ. ಹಸುಗೂಸನ್ನು ನೀರಿನ ಟ್ಯಾಂಕ್‌ಗೆ ಯಾರು ಎಸೆದರು ಎಂಬ ಬಗ್ಗೆ ಸೂರ್ಯನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಮನು ಮತ್ತು ಹರ್ಷಿತಾ ಪ್ರೀತಿಸಿ ಮದುವೆಯಾದವರು. ಹರ್ಷಿತಾ ಗರ್ಭಿಣಿಯಾದಾಗ ದಂಪತಿ ನಡುವೆ ವೈಮನಸ್ಸು ಮೂಡಿತು. 7 ತಿಂಗಳಿಗೇ ಸಿಜೇರಿಯನ್‌ ಮೂಲಕ ಹೆರಿಗೆ ಮಾಡಿಸಲಾಗಿತ್ತು. ಅವಧಿ ಪೂರ್ವ ಶಿಶು ಜನನವಾದ ಕಾರಣ ಮಗುವಿನ ಬೆಳವಣಿಗೆಯಲ್ಲಿ ನ್ಯೂನತೆ ಕಂಡು ಬಂದಿತ್ತು. ಉಸಿರಾಟದ ತೊಂದರೆಗಾಗಿ ಅಪಾರ ಹಣ ಖರ್ಚು ಮಾಡಿ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ನೀಡಲಾಗಿತ್ತು. ಮಗು ಸಂಪೂರ್ಣ ಚೇತರಿಸಿಕೊಂಡ ಬಳಿಕ ವಾರದ ಹಿಂದೆಯಷ್ಟೇ ಮನೆಗೆ ಕರೆತರಲಾಗಿತ್ತು.

ಬುಧವಾರ ಬೆಳಗ್ಗೆ ತಾಯಿ ಶೌಚಾಲಯಕ್ಕೆ ಹೋದಾಗ ಮಗು ಇದ್ದಕ್ಕಿದ್ದಂತೆ ಕಾಣೆಯಾಗಿದೆ. ಗಾಬರಿಯಾಗಿ ಹುಡುಕಾಡಿದರೂ ಮಗು ಪತ್ತೆಯಾಗಿಲ್ಲ. ಕೂಡಲೇ ಸೂರ್ಯನಗರ ಪೊಲೀಸರಿಗೆ ಹರ್ಷಿತಾ ದೂರು ನೀಡಿದ್ದರು. ಪೊಲೀಸರು ಪರಿಶೀಲಿಸಿದಾಗ ಮನೆಯ ಸಿಂಟೆಕ್ಸ್ ನೀರಿನ ಟ್ಯಾಂಕ್‌ನಲ್ಲಿ ಮಗುವಿನ ಶವ ಪತ್ತೆಯಾಗಿದೆ. ಈ ಬಗ್ಗೆ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಸುದ್ದಿ ಓದದಿದ್ದರೆ ಡಿಜಿಟಲ್‌ ಅರೆಸ್ಟ್‌ ಆಗ್ತಿರಿ!
ಮಗುಗಾಗಿ ತನ್ನ ಪತ್ನಿಯನ್ನೇ ಸಿನಿಮೀಯ ಶೈಲಿಯಲ್ಲಿ ಅಪಹರಿಸಿದ ನಿರ್ಮಾಪಕ