ಕನ್ನಡಪ್ರಭ ವಾರ್ತೆ ಮದ್ದೂರು
ತುಮಕೂರು ನಗರದ ಗೋಕುಲ ಬಡಾವಣೆಯ 7ನೇ ಕ್ರಾಸ್ ನಿವಾಸಿ ನವೀನ್ಕುಮಾರ್ (25) ಹಾಗೂ ದೊಡ್ಡಿಹಳ್ಳಿಯ ಬಿ.ಕೆ.ವಿನಯ್ (22) ಮೃತಪಟ್ಟವರು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ.
ನವೀನ್ಕುಮಾರ್ ಸಾವಿನ ಸುದ್ದಿ ತಿಳಿದು ಆಸ್ಪತ್ರೆಗೆ ಧಾವಿಸಿದ ಆತನ ಮಾವ ನಾಗೇಂದ್ರ (44) ತೀವ್ರ ಹೃದಯಾಘಾತದಿಂದ ಅಸ್ವಸ್ಥಗೊಂಡನು. ಮದ್ದೂರು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮೃತ ನವೀನ್ಕುಮಾರ್ ಹಾಗೂ ವಿನಯ್ ಅವರು ತಮ್ಮ ಆರು ಮಂದಿ ಸ್ನೇಹಿತರೊಂದಿಗೆ ಮೂರು ಬೈಕ್ಗಳಲ್ಲಿ ತುಮಕೂರಿನಿಂದ ಚನ್ನಪಟ್ಟಣದ ಡಾಬಾವೊಂದಕ್ಕೆ ಮಾಂಸದೂಟ ಮಾಡಲು ಬರುತ್ತಿದ್ದರು. ಸಿದ್ದನಹಳ್ಳಿ ಬಳಿ ರಾತ್ರಿ 7 ಗಂಟೆ ಸಮಯದಲ್ಲಿ ಬೈಕ್ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಈ ಸಂಬಂಧ ಪ್ರಕರಣ ದಾಖಲು ಮಾಡಿಕೊಂಡಿರುವ ಕೆಸ್ತೂರು ಪೊಲೀಸರು ಟ್ರ್ಯಾಕ್ಟರ್ ಹಾಗೂ ಚಾಲಕನನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.