ಭಾರತದಲ್ಲಿ ಸಿಖ್ಖರಿಗೆ ಧಾರ್ಮಿಕ ಸ್ವಾತಂತ್ರ್ಯ ಇಲ್ಲ ಎಂದ ರಾಹುಲ್‌ ವಿರುದ್ಧ ಬಿಜೆಪಿ ಸಿಖ್‌ ಘಟಕ ಪ್ರತಿಭಟನೆ

KannadaprabhaNewsNetwork |  
Published : Sep 12, 2024, 01:45 AM ISTUpdated : Sep 12, 2024, 04:57 AM IST
ಖ್‌ ಘಟಕ ಪ್ರತಿಭಟನೆ | Kannada Prabha

ಸಾರಾಂಶ

‘ಭಾರತದಲ್ಲಿ ಸಿಖ್ಖರಿಗೆ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ನೀಡಿದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಸಿಖ್‌ ಘಟಕ ಬುಧವಾರ ಪ್ರತಿಭಟನೆ ನಡೆಸಿತು.

ನವದೆಹಲಿ: ‘ಭಾರತದಲ್ಲಿ ಸಿಖ್ಖರಿಗೆ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಮೆರಿಕದಲ್ಲಿ ನೀಡಿದ ಹೇಳಿಕೆಯನ್ನು ವಿರೋಧಿಸಿ ಬಿಜೆಪಿ ಸಿಖ್‌ ಘಟಕ ಬುಧವಾರ ಪ್ರತಿಭಟನೆ ನಡೆಸಿತು.

ವಿಜ್ಞಾನ ಭವನದಿಂದ ಸೋನಿಯಾ ಗಾಂಧಿ ಅವರ 10 ಜನಪಥ ನಿವಾಸದತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ‘ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ತಾವು ಅತ್ಯಂತ ಸುರಕ್ಷಿತರಾಗಿದ್ದೇವೆ’ ಎಂದರು ಹಾಗೂ ‘ರಾಹುಲ್‌ ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು’ ಎಂದು ಆಗ್ರಹಿಸಿದರು.

ಈ ನಡುವೆ ಬಿಜೆಪಿ, ‘ರಾಹುಲ್‌ ವಿದೇಶದಲ್ಲಿ ದೇಶವಿರೋಧಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಮಹಿಳೆಯರ ಜತೆ ಅನುಚಿತ ವರ್ತನೆ - ವಾರದ ಬಳಿಕವೂ ಬೀಳುತ್ತೆ ಕೇಸ್
ರೇಪಿಸ್ಟ್‌ ಸೆಂಗರ್‌ ಶಿಕ್ಷೆ ಅಮಾನತಿಗೆ ಸುಪ್ರೀಂ ತಡೆ