3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜಿಗೆ ಇ-ಮೇಲ್‌ ಸಂದೇಶದ ಬಾಂಬ್‌ ಬೆದರಿಕೆ : ಆತಂಕದ ವಾತಾವರಣ ಸೃಷ್ಟಿ

KannadaprabhaNewsNetwork |  
Published : Oct 05, 2024, 01:31 AM ISTUpdated : Oct 05, 2024, 05:00 AM IST
bomb threat

ಸಾರಾಂಶ

ಕಿಡಿಗೇಡಿಗಳು ನಗರದ 3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜುಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್‌ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಜರುಗಿದೆ.

 ಬೆಂಗಳೂರು : ಕಿಡಿಗೇಡಿಗಳು ನಗರದ 3 ಪ್ರತಿಷ್ಠಿತ ಇಂಜಿನಿಯರಿಂಗ್‌ ಕಾಲೇಜುಗಳಿಗೆ ಶುಕ್ರವಾರ ಬಾಂಬ್ ಬೆದರಿಕೆ ಇ-ಮೇಲ್‌ ಸಂದೇಶ ಕಳುಹಿಸಿದ್ದ ಹಿನ್ನೆಲೆಯಲ್ಲಿ ಕಾಲಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಜರುಗಿದೆ.

ಸತ್ತನಾಥಪುರ ವಿ ಶೇಖರ್‌ ಹೆಸರಿನ ಇ-ಮೇಲ್‌ ಐಡಿಯಿಂದ ಈ 3 ಇಂಜಿನಿಯರಿಂಗ್‌ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದೆ. ಈ ಕಾಲೇಜುಗಳಿಗೆ ಹೈಡ್ರೋಜನ್‌ಯುಕ್ತ ಸುಧಾರಿತ ಸ್ಫೋಟ ಸಾಧನ(ಐಇಡಿ) ಅಳವಡಿಸಲಾಗಿದೆ. ಇಂದು ಸಂಜೆ 5 ಗಂಟೆಯೊಳಗೆ ಕಾಲೇಜಿನಿಂದ ಹೊರಗೆ ಹೋಗುವಂತೆ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಮಧ್ಯಾಹ್ನ ಸುಮಾರು 1 ಗಂಟೆಗೆ ಈ ಇಮೇಲ್‌ ಗಮನಿಸಿದ ಮೂರು ಕಾಲೇಜುಗಳ ಆಡಳಿತ ಮಂಡಳಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

1 ತಾಸು ತಪಾಸಣೆ:

ಇದರ ಬೆನ್ನಲ್ಲೇ ಪೊಲೀಸರು, ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ ಹಾಗೂ ಶ್ವಾನದ ದಳದ ಸಿಬ್ಬಂದಿ ಕಾಲೇಜುಗಳಿಗೆ ದೌಡಾಯಿಸಿ, ಮುನ್ನೆಚ್ಚರಿಕಾ ಕ್ರಮವಾಗಿ ಕಾಲೇಜಿನೊಳಗೆ ಇದ್ದವರನ್ನು ಹೊರಗೆ ಕಳುಹಿಸಿದ್ದಾರೆ. ಬಳಿಕ ಕಾಲೇಜುಗಳ ಒಳ ಹಾಗೂ ಹೊರ ಆವರಣವನ್ನು ಸುಮಾರು 1 ತಾಸಿಗೂ ಅಧಿಕ ಕಾಲ ಇಂಚಿಂಚೂ ತಪಾಸಣೆ ನಡೆಸಿದ್ದಾರೆ. ಈ ವೇಳೆ ಯಾವುದೇ ಸ್ಫೋಟಕ ಸಾಮಗ್ರಿಗಳು, ಬಾಂಬ್‌ಗಳು, ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.

ಮೂರು ಪ್ರತ್ಯೇಕ ಎಫ್‌ಐಆರ್‌ ದಾಖಲು: ಈ ಸಂಬಂಧ ಹನುಮಂತನಗರ, ಸದಾಶಿವನಗರ ಹಾಗೂ ಬಸವನಗುಡಿ ಪೊಲೀಸ್‌ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್‌ ದಾಖಲಾಗಿದ್ದು, ಹುಸಿ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದ ಕಿಡಿಗೇಡಿಗಳ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಬಿಎಂಎಸ್‌, ಬಿಐಟಿ ಸೇರಿದಂತೆ ಮೂರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್‌ ಸಂದೇಶ ಬಂದಿದೆ. ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳದ ಸಿಬ್ಬಂದಿ ತಪಾಸಣೆ ನಡೆಸಿದ್ದು, ಹುಸಿ ಬಾಂಬ್‌ ಬೆದರಿಕೆ ಎಂಬುದು ಖಚಿತವಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಕಿಡಿಗೇಡಿಗಳ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ.

-ಲೋಕೇಶ್‌ ಭರಮಪ್ಪ ಜಗಲಾಸಾರ್‌, ದಕ್ಷಿಣ ವಿಭಾಗದ ಡಿಸಿಪಿ

 ಬಸವನಗುಡಿ ರಸ್ತೆಯ ಬಿಎಂಎಸ್‌ ಇಂಜಿನಿಯರಿಂಗ್‌ ಕಾಲೇಜು, ಎಂಎಸ್‌ಆರ್‌ ನಗರದ ಎಂ.ಎಸ್‌.ರಾಮಯ್ಯ ಇಂಜಿನಿಯರಿಂಗ್‌ ಕಾಲೇಜು ಹಾಗೂ ಬಸವನಗುಡಿಯ ಬೆಂಗಳೂರು ಇನ್ಸ್‌ಟಿಟ್ಯೂಟ್‌ ಆಫ್‌ ಟೆಕ್ನಾಲಜಿ(ಬಿಐಟಿ) ಕಾಲೇಜುಗಳಿಗೆ

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಖರ್ಚಿಗೆ ಹಣ ನೀಡದ್ದಕ್ಕೆ ಪತ್ನಿಯನ್ನು ಕೊಂದು ಅಪಘಾತದ ಕಥೆ ಕಟ್ಟಿದ ಪತಿರಾಯ
ಕಾರು ಡಿಕ್ಕಿಯಾಗಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿ ಸಾವು