ನೃತ್ಯದ ವೇಳೆ ಮೈ ತಾಕಿದ್ದಕ್ಕೆ ಅಪ್ರಾಪ್ತನ ಕೊಂದ ಬಾಲಕರು

KannadaprabhaNewsNetwork |  
Published : Apr 26, 2024, 01:30 AM ISTUpdated : Apr 26, 2024, 05:01 AM IST
murder

ಸಾರಾಂಶ

ಕರಗೋತ್ಸವ ವೇಳೆ ನೃತ್ಯ ಮಾಡುವಾಗ ಮೈ ತಾಕಿದ್ದಕ್ಕೆ ನಡೆದ ಜಗಳದಲ್ಲಿ ಅಪ್ರಾಪ್ತನನ್ನು ಬಾಲಕರು ಚಾಕು ಇರಿದು ಕೊಲೆ ಮಾಡಿದ್ದಾರೆ.

 ಬೆಂಗಳೂರು :  ಕರಗೋತ್ಸವದ ವೇಳೆ ನೃತ್ಯ ಮಾಡುವಾಗ ಮೈ ತಾಕಿದ ವಿಚಾರವಾಗಿ ಅಪ್ರಾಪ್ತ ಬಾಲಕರ ನಡುವೆ ಉಂಟಾದ ಜಗಳವು ಕೊಲೆಯೊಂದಿಗೆ ಅಂತ್ಯವಾಗಿರುವ ಘಟನೆ ಗಾಂಧಿನಗರದ ಅಣ್ಣಮ್ಮ ದೇವಾಲಯ ಸಮೀಪ ನಡೆದಿದೆ.

ಶೇಷಾದ್ರಿಪುರದ ಜೆಸಿಡಬ್ಲ್ಯು ಕಾಲೋನಿ ನಿವಾಸಿ ಸಾರಧಿ (17) ಕೊಲೆಯಾದ ದುರ್ದೈವಿ. ಈ ಕೊಲೆ ಪ್ರಕರಣ ಸಂಬಂಧ ನಾಲ್ವರು ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕರಗ ನಿಮಿತ್ತ ಗಾಂಧಿನಗರದ ಅಣ್ಣಮ್ಮ ದೇವಾಲಯದ ಬಳಿ ಬುಧವಾರ ನಸುಕಿನಲ್ಲಿ ಅಪ್ರಾಪ್ತರು ಕುಣಿಯುುವಾಗ ಈ ಕೃತ್ಯ ನಡೆದಿದೆ.

ತನ್ನ ಪೋಷಕರ ಜತೆ ನೆಲೆಸಿದ್ದ ಮೃತ ಸಾರಧಿ, ಕೂಲಿ ಕೆಲಸ ಮಾಡಿಕೊಂಡಿದ್ದ. ಕರಗ ನೋಡಲು ಗಾಂಧಿನಗರದ ಅಣ್ಣಮ್ಮ ದೇವಾಲಯ ಬಳಿ ತೆರಳಿದ್ದಾನೆ. ಕರಗ ಸಾಗುವಾಗ ಬುಧವಾರ ನಸುಕಿನ 3.30ರ ಸುಮಾರಿಗೆ ಹುಡುಗರ ಜತೆ ಆತನೂ ಕುಣಿಯಲು ಶುರು ಮಾಡಿದ್ದಾನೆ. 

ಆಗ ಇತರೆ ಹುಡುಗರಿಗೆ ಮೈ ತಾಕಿದೆ. ಇದೇ ವಿಚಾರವಾಗಿ ಹುಡುಗರ ಮಧ್ಯೆ ಜಗಳವಾಗಿ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೋಪಗೊಂಡ ಅಪ್ರಾಪ್ತ ಬಾಲಕರು, ಸಾರಥಿ ಎದೆಗೆ ಹೂ ಕತ್ತರಿಸುವ ಕತ್ತರಿಯಿಂದ ಇರಿದಿದ್ದಾರೆ. ಇದರಿಂದ ತೀವ್ರವಾಗಿ ಗಾಯಗೊಂಡು ಸಾರಥಿ ಮೃತಪಟ್ಟಿದ್ದಾನೆ. ಈ ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಆರೋಪಿತ ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ತಡೆಗೋಡೆಗೆ ಕಾರು ಡಿಕ್ಕಿ: ನವ ವಿವಾಹಿತೆ ಸಾವು
ಬೈರತಿಗೆ ಮಧ್ಯಂತರ ಬೇಲಿಲ್ಲ, ಸಿಐಡಿ ಶೋಧ