ಬೈಕ್‌ಗಳ ನಡುವೆ ಡಿಕ್ಕಿ: ಇಬ್ಬರು ಸಾವು

KannadaprabhaNewsNetwork |  
Published : Oct 18, 2023, 01:00 AM ISTUpdated : Oct 18, 2023, 01:01 AM IST
17ಕೆಎಂಎನ್ ಡಿ36ಶ್ರೀರಂಗಪಟ್ಟಣದ ಟಿ.ಎಂ ಹೊಸೂರು  - ಗೌಡಹಳ್ಳಿ ಗೇಟ್ ಬಳಿ ಹೆದ್ದಾರಿಯಲ್ಲಿ  ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದು. | Kannada Prabha

ಸಾರಾಂಶ

ಬೈಕ್‌ಗಳ ನಡುವೆ ಡಿಕ್ಕಿ: ಇಬ್ಬರು ಸಾವು

ಶ್ರೀರಂಗಪಟ್ಟಣ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ತಾಲೂಕಿನ ಟಿ.ಎಂ. ಹೊಸೂರು - ಗೌಡಹಳ್ಳಿ ಗೇಟ್ ಬಳಿಯ ಹೆದ್ದಾರಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ತಾಲೂಕಿನ ಗೌಡಹಳ್ಳಿ ಶ್ರೀಧರ್ ಬಿನ್ ರಾಮಲಿಂಗೇಗೌಡ (35) ಹಾಗೂ ಶ್ರೀನಿವಾಸ ಅಗ್ರಹಾರ ಗ್ರಾಮದ ಪುನೀತ್ ಬಿನ್ ಲೋಕೇಶ್ (34) ಮೃತಪಟ್ಟವರು. ಯೋಗೇಶ್ ಮತ್ತು ದರ್ಶನ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 17ಕೆಎಂಎನ್ ಡಿ36 ಶ್ರೀರಂಗಪಟ್ಟಣದ ಟಿ.ಎಂ ಹೊಸೂರು - ಗೌಡಹಳ್ಳಿ ಗೇಟ್ ಬಳಿ ಹೆದ್ದಾರಿಯಲ್ಲಿ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿರುವುದು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಹಲಗೂರು: ಚಿರತೆ ದಾಳಿಗೆ ಕರು ಬಲಿ
6 ನೇ ಕ್ಲಾಸ್ ವಿದ್ಯಾರ್ಥಿ ಮೇಲೆ ಪೊಲೀಸ್ ಹಲ್ಲೆ? ಬಲವಂತದ ಸಾಕ್ಷಿ ವಿಡಿಯೋ ಚಿತ್ರಿಕರಣ