ಬಳ್ಳಾರಿ ಜೈಲಲ್ಲಿ ಮಂಕಾದ ದರ್ಶನ್‌ : ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ನಟ

Published : Aug 31, 2024, 07:48 AM IST
darshan

ಸಾರಾಂಶ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್‌ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ.

ಬಳ್ಳಾರಿ :  ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿಗೆ ಶಿಫ್ಟ್‌ ಆಗಿರುವ ನಟ ದರ್ಶನ್ ಒಬ್ಬಂಟಿಯಾದಂತಾಗಿದ್ದು, ತೀವ್ರ ಮಂಕಾಗಿದ್ದಾರೆ. ಊಟ, ಉಪಾಹಾರ ಸರಿಯಾಗಿ ಮಾಡದೆ ಮೌನವಾಗಿಯೇ ದಿನ ಕಳೆಯತ್ತಿದ್ದಾರೆ. ಜೈಲು ಸಿಬ್ಬಂದಿ ಬಳಿಯೂ ಮಾತನಾಡದೆ ಮೌನಕ್ಕೆ ಜಾರಿರುವ ಅವರು, ಸಮಯ ಕಳೆಯಲು ಪುಸ್ತಕಗಳ ಮೊರೆ ಹೋಗಿದ್ದಾರೆ.

ಬಳ್ಳಾರಿ ಜೈಲು ಸೇರಿದ ಬಳಿಕ ಮೊದಲ ದಿನವಾದ ಗುರುವಾರ ರಾತ್ರಿ ಅವರು ಸರಿಯಾಗಿ ಊಟ ಮಾಡಿರಲಿಲ್ಲ. 2ನೇ ದಿನವಾದ ಶುಕ್ರವಾರ ಬೆಳಗಿನ ಉಪಾಹಾರಕ್ಕೆಂದು ನೀಡಿದ್ದ ಉಪ್ಪಿಟ್ಟು, ಮಧ್ಯಾಹ್ನ ರಾಗಿಮುದ್ದೆ, ಚಪಾತಿ ಮತ್ತು ಅನ್ನ ಸಾಂಬಾರು ಸೇವಿಸಿದ್ದಾರೆ. ಬಳ್ಳಾರಿಯ ತಾಪಮಾನ ಸಂಕಷ್ಟ ಅವರಿಗೆ ಸಮಸ್ಯೆ ತಂದೊಡ್ಡಿದೆ, ಜತೆಗೆ ಕಾರಾಗೃಹದ ಸೊಳ್ಳೆಗಳು ನಿದ್ರೆಗೆಡಿಸಿವೆ ಎಂದು ಹೇಳಲಾಗುತ್ತಿದೆ.

ಭಾನುವಾರ ಕುಟುಂಬ ಭೇಟಿ: ಮೂಲಗಳ ಪ್ರಕಾರ ದರ್ಶನ್ ಕುಟುಂಬ ಸದಸ್ಯರು ಭಾನುವಾರ ಬಳ್ಳಾರಿಗೆ ಬರಲಿದ್ದು, ದರ್ಶನ್ ಭೇಟಿ ಮಾಡಲಿದ್ದಾರೆ. ಬಳ್ಳಾರಿಯಲ್ಲಿನ ವಾತಾವರಣ ಹೊಂದಾಣಿಕೆ ಸೇರಿ ನಾನಾ ಕಾರಣಗಳನ್ನು ಮುಂದಿಟ್ಟುಕೊಂಡು ಜೈಲು ಬದಲಾವಣೆಗೆ ಅವರು ಪುನಃ ಕೋರ್ಟ್‌ ಮೊರೆ ಹೋಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ವಕೀಲರ ಜತೆ ದರ್ಶನ್ ಚರ್ಚಿಸುವ ಸಾಧ್ಯತೆಯಿದೆ.

ಬಳ್ಳಾರಿಯಲ್ಲಿ ಸಾಕಷ್ಟು ದಿನ ಇರಬೇಕಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಇಲ್ಲೇ ಮನೆಯೊಂದನ್ನು ಬಾಡಿಗೆ ಹಿಡಿಯಲು ನಿರ್ಧರಿಸಿದ್ದಾರೆನ್ನಲಾಗಿದೆ. ದರ್ಶನ್ ಜತೆ ಈ ಕುರಿತು ಚರ್ಚಿಸಿದ ಬಳಿಕ ಮುಂದಿನ ನಿರ್ಧಾರವಾಗಲಿದೆ.

ಬ್ಯಾರಕ್‌ನಲ್ಲೇ ಓಡಾಟ: ಶುಕ್ರವಾರ ಬೆಳಗ್ಗೆ 6.30ಕ್ಕೆ ಎದ್ದಿರುವ ದರ್ಶನ್‌ ಕೂತು ಕೂತು ಕಾಲು ಹಿಡಿದುಕೊಂಡಿದ್ದು ಒಂದಷ್ಟು ಓಡಾಡಲು ಅವಕಾಶ ಮಾಡಿಕೊಡಿ ಎಂದು ಅಧಿಕಾರಿಗಳನ್ನು ಕೇಳಿಕೊಂಡಿದ್ದಾರೆ. ಅದರಂತೆ ಮಧ್ಯಾಹ್ನ ಅರ್ಧಗಂಟೆ ಹಾಗೂ ಸಂಜೆ ಅರ್ಧಗಂಟೆ ಬ್ಯಾರಕ್ ಆವರಣದಲ್ಲೇ ಅವರಿಗೆ ಓಡಾಡಲು ಅವಕಾಶ ಮಾಡಿಕೊಡಲಾಗಿದೆ ಎಂದು ತಿಳಿದುಬಂದಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಪಿಡಬ್ಲ್ಯುಡಿ ಎಇಇ ಮನೆ ಮೇಲೆ ಲೋಕಾ ದಾಳಿ
₹7 ಕೋಟಿ ಜಪ್ತಿ ಹಣ ರಕ್ಷಣೆಗೆ ರಾತ್ರಿ ಪೊಲೀಸ್‌ ಠಾಣೆಯೇ ಬಂದ್‌?