ಕಿಕ್ಕೇರಿ:
ಗ್ರಾಮದ ಲೇಟ್ ಜವರೇಗೌಡರ ಪುತ್ರ ಟಿ.ಜೆ.ನಾಗೇಶ್ (50) ಆತ್ಮಹತ್ಯೆ ಮಾಡಿಕೊಂಡವರು.
ರೈತ ನಾಗೇಶ್ 4 ಎಕರೆ ಜಮೀನು ಹೊಂದಿದ್ದು, ಕೃಷಿ ಚಟುವಟಿಕೆಗಾಗಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ 3 ಲಕ್ಷ ರು. ಸಾಲ ಪಡೆದಿದ್ದರು. ಜೊತೆಗೆ ಸುಮಾರು 7 ಲಕ್ಷ ರು. ಖಾಸಗಿಯಾಗಿ ಸಾಲ ಮಾಡಿಕೊಂಡಿದ್ದನು. ಸಕಾಲದಲ್ಲಿ ಮಳೆಯಾಗದ ಕಾರಣ ಜಮೀನಿನಲ್ಲಿ ಯಾವುದೇ ಬೆಳೆ ಬೆಳೆಯಲು ಸಾಧ್ಯವಾಗಿರಲಿಲ್ಲ. ಇದರಿಂದ ಮನನೊಂದು ಭಾನುವಾರ ಮಧ್ಯಾಹ್ನ ತಮ್ಮ ಮನೆಯಲ್ಲಿದ್ದ ಕ್ರಿಮಿನಾಶಕದ ಮಾತ್ರೆಗಳನ್ನು ಸೇವಿಸಿ ಅಸ್ವಸ್ಥಗೊಂಡಿದ್ದರು. ವಿಷಯ ತಿಳಿದ ಕುಟುಂಬದವರು ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಕೊಡಿಸಿ ವೈದ್ಯರ ಸಲಹೆ ಮೇರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯದಲ್ಲಿಯೇ ಮೃತರಾಗಿದ್ದಾರೆ.ಮೃತರ ಪತ್ನಿ ಇಂದ್ರಮ್ಮ ನೀಡಿದ ದೂರಿನ ಮೇರೆಗೆ ಕಿಕ್ಕೇರಿ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಮೃತರಿಗೆ ಪತ್ನಿ, ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಮೃತರ ತೋಟದಲ್ಲಿ ಸೋಮವಾರ ಅಂತ್ಯಕ್ರಿಯೆ ನೆರವೇರಿತು.ಅಪರಿಚಿತ ಶವ ಪತ್ತೆಮಂಡ್ಯ: