ಪೀಣ್ಯ ದಾಸರಹಳ್ಳಿ : ಅನಾರೋಗ್ಯದಿಂದ ಶ್ವಾನ ಸತ್ತ ನೋವಿಗೆ ನಾಯಿ ಚೈನ್ ಬಳಸಿ ಆತ್ಮಹತ್ಯೆ

Published : Jan 02, 2025, 09:20 AM IST
death

ಸಾರಾಂಶ

ಸಾಕು ನಾಯಿ ಅನಾರೋಗ್ಯದಿಂದ ಸತ್ತ ನೋವಿನಿಂದ ಅದರದ್ದೇ ಚೈನ್ ಬಳಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೆಗ್ಗಡದೇವನಪುರದಲ್ಲಿ ನಡೆದಿದೆ.

ಪೀಣ್ಯ ದಾಸರಹಳ್ಳಿ:  ಸಾಕು ನಾಯಿ ಅನಾರೋಗ್ಯದಿಂದ ಸತ್ತ ನೋವಿನಿಂದ ಅದರದ್ದೇ ಚೈನ್ ಬಳಸಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಹೆಗ್ಗಡದೇವನಪುರದಲ್ಲಿ ನಡೆದಿದೆ.

ಹೆಗ್ಗಡದೇವನಪುರ ನಿವಾಸಿ ರಾಜಶೇಖರ್ (33) ಮೃತ. ರಾಜಶೇಖರ್ ಅವರು 9 ವರ್ಷದಿಂದ ಸಾಕಿದ್ದ ‘ಬೌನ್ಸಿ’ ಎಂಬ ಹೆಸರಿನ ಜರ್ಮನ್ ಶಫರ್ಡ್ ತಳಿಯ ಸಾಕುನಾಯಿ ಮಂಗಳವಾರ ಮೃತಪಟ್ಟಿತ್ತು. 

ತಮ್ಮ ಜಮೀನಿನಲ್ಲಿ ನಾಯಿತ ಅಂತ್ಯಸಂಸ್ಕಾರ ನೆರವೇರಿಸಿ ಮನೆಗೆ ಬಂದಿದ್ದ ರಾಜಶೇಖರ್ ಬುಧವಾರ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಹಣಕ್ಕಾಗಿ ಪರಿಚಿತನನ್ನೇ ಕಿಡ್ನಾಪ್‌ ಮಾಡಿದ್ದ ನಾಲ್ವರ ಬಂಧನ
ಧರ್ಮರಾಯಸ್ವಾಮಿ ದೇಗುಲದ ನೆಕ್ಲೆಸ್‌ ಕಳವು