ರಸ್ತೆ ವಿಭಜಕಕ್ಕೆ ಆಟೋ ಡಿಕ್ಕಿ: ಗಾಯಗೊಂಡು ಚಾಲಕ ಸಾವು

KannadaprabhaNewsNetwork |  
Published : May 10, 2024, 01:36 AM ISTUpdated : May 10, 2024, 04:52 AM IST
death

ಸಾರಾಂಶ

ರಸ್ತೆ ವಿಭಜಕ್ಕೆ ಆಟೋ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  ಬೆಂಗಳೂರು :  ರಸ್ತೆ ವಿಭಜಕ್ಕೆ ಆಟೋ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿರುವ ದಾರುಣ ಘಟನೆ ಬನಶಂಕರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೊಸಕೆರೆಹಳ್ಳಿ ನಿವಾಸಿ ಪೂಜಾರಿ ದೇವರಾಜ ನಾಯಕ್ (32) ಮೃತ ದುರ್ದೈವಿ. ಆಟೋ ವಹಿವಾಟು ಮುಗಿಸಿಕೊಂಡು ಬುಧವಾರ ರಾತ್ರಿ ದೇವರಾಜ ಮನೆಗೆ ಮರಳುವಾಗ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಮೃತ ದೇವರಾಜ ಮೂಲತಃ ಆಂಧ್ರಪ್ರದೇಶದವರಾಗಿದ್ದು, ಹಲವು ವರ್ಷಗಳಿಂದ ನಗರದಲ್ಲಿ ತಮ್ಮ ತಾಯಿ ಜತೆ ಅವರು ನೆಲೆಸಿದ್ದರು. ಹೊಸಕೆರೆಹಳ್ಳಿ ಕ್ರಾಸ್‌ನಿಂದ ಬುಧವಾರ ರಾತ್ರಿ ಸೀತಾ ಸರ್ಕಲ್ ಕಡೆ ದೇವರಾಜ ನಾಯಕ್‌ ತೆರಳುವಾಗ ಈ ಅವಘಡ ಸಂಭವಿಸಿದೆ. ಚಾಲನೆ ಮೇಲೆ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅವರು ಆಟೋ ಗುದ್ದಿಸಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ದೇವರಾಜ್ ನಾಯಕ್ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌