ಕಾರಿನಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣ ಜಪ್ತಿ

KannadaprabhaNewsNetwork |  
Published : Apr 21, 2024, 02:19 AM ISTUpdated : Apr 21, 2024, 06:58 AM IST
ಹಣ ಸಾಗಿಸುತ್ತಿದ್ದ ಕಾರು. | Kannada Prabha

ಸಾರಾಂಶ

ಬಿನ್ನಿಪೇಟೆಯ ಟ್ಯಾಂಕ್ ಬಂಡ್ ರಸ್ತೆಯ ಇಟಿಎ ಮಾಲ್ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

  ಬೆಂಗಳೂರು :  ಬಿನ್ನಿಪೇಟೆಯ ಟ್ಯಾಂಕ್ ಬಂಡ್ ರಸ್ತೆಯ ಇಟಿಎ ಮಾಲ್ ಬಳಿ ಕಾರೊಂದರಲ್ಲಿ ಸಾಗಿಸುತ್ತಿದ್ದ ₹2 ಕೋಟಿ ಹಣವನ್ನು ಚುನಾವಣಾ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಶನಿವಾರ ಸಂಜೆ ಸುಮಾರು 4 ಗಂಟೆಯಲ್ಲಿ ವೆಂಕಟೇಶ್ ಎಂಬುವವರಿಗೆ ಸೇರಿದ ಕೆಎ 09 ಎಂಬಿ 2412 ನೋಂದಣಿ ಸಂಖ್ಯೆಯ ಕಾರಿನಲ್ಲಿ ನಗದು ಹಣ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಕಾರನ್ನು ತಡೆದು ಪರಿಶೀಲನೆ ಮಾಡಿದಾಗ ಸುಮಾರು ಎರಡು ಕೋಟಿ ಹಣ ಪತ್ತೆಯಾಗಿದೆ. ಕೂಡಲೇ ಆ ಕಾರು ಹಾಗೂ ಹಣವನ್ನು ಜಪ್ತಿ ಮಾಡಿದ್ದಾರೆ.

ಮಲ್ಲೆಶ್ವರದ ಕೋದಂಡರಾಮಪುರ ಕೆನರಾ ಬ್ಯಾಂಕ್ ಶಾಖೆಯಲ್ಲಿ ಮಾ.27ರಂದು ಈ ಹಣವನ್ನು ಡ್ರಾ ಮಾಡಲಾಗಿತ್ತು. ₹2 ಕೋಟಿ ಹಣವನ್ನು ಮೈಸೂರಿಗೆ ಕಾರಿನಲ್ಲಿ ಸಾಗಿಸಲಾಗುತ್ತಿತ್ತು ಎಂದು ಬ್ಯಾಂಕ್ ನಿಂದ ಹಣ ಡ್ರಾ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರಿನಲ್ಲಿ ಸಾಗಿಸುತ್ತಿದ್ದ ₹2 ಕೋಟಿಯನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಪರಿಶೀಲಿಸಲಾಗುತ್ತಿದೆ. ಚುನಾವಣಾಧಿಕಾರಿಗಳಿಂದ ದೂರು ಸ್ವೀಕರಿಸಿ ಕಾನೂನು ಕ್ರಮ ಕೈಗೊಳ್ಖುವುದಾಗಿ ಕಾಟನ್‌ಪೇಟೆ ಠಾಣೆ ಪೊಲೀಸರು ತಿಳಿಸಿದ್ದಾರೆ. ಈ ಹಣದ ಮೂಲ ಕೆದಕಲು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪ್ರಕರಣ ವರ್ಗಾವಣೆಯಾಗಲಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಷೇರುಪೇಟೆಯಲ್ಲಿ ಹೂಡಿಕೆ ನೆಪದಲ್ಲಿ ಉದ್ಯಮಿಗೆ ₹8.3 ಕೋಟಿ ಧೋಖಾ
ಪಾದಚಾರಿಗಳಿಗೆ ಬೆಕ್ ಗುದ್ದಿಸಿ ಕೆಳಗೆ ಬಿದ್ದು ಅಪ್ರಾಪ್ತ ಸವಾರ ಸಾವು