ಗನ್‌ಮ್ಯಾನ್‌ ತಪ್ಪಿಸಿ ಹ್ಯಾಕರ್ ಶ್ರೀಕಿ ಓಡಾಟ: ಪೊಲೀಸರಿಗೆ ತಲೆನೋವು

KannadaprabhaNewsNetwork |  
Published : Apr 04, 2024, 02:01 AM ISTUpdated : Apr 04, 2024, 05:32 AM IST
ಶ್ರೀಕಿ | Kannada Prabha

ಸಾರಾಂಶ

ಬಿಟ್‌ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕಿ ತನಗೆ ನೀಡಿರುವ ಗನ್‌ಮ್ಯಾನ್‌ಗಳನ್ನು ದಾರಿ ತಪ್ಪಿಸಿ ಓಡಾಡುತ್ತಿರುವುದು ಪೊಲೀಸರಿಗೆ ತಲೆನೋವಾಗಿದೆ. ಆತಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಇಬ್ಬರು ಗನ್‌ಮ್ಯಾನ್‌ಗಳನ್ನು ನೀಡಲಾಗಿದೆ.

 ಬೆಂಗಳೂರು :  ಬಹುಕೋಟಿ ಬಿಟ್‌ ಕಾಯಿನ್ ಹಗರಣದ ಪ್ರಮುಖ ಆರೋಪಿ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕುಖ್ಯಾತ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿನನ್ನು ಕಾಯುವುದೇ ಆತನ ಗನ್ ಮ್ಯಾನ್‌ಗಳಿಗೆ ಭಾರಿ ತಲೆನೋವಾಗಿ ಪರಿಣಿಸಿದೆ ಎಂದು ತಿಳಿದು ಬಂದಿದೆ.

ಈ ಹಗರದಣಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ರಾಜಕಾರಣಿಗಳ ಹೆಸರು ಕೇಳಿ ಬಂದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀಕಿ ಭದ್ರತೆಗೆ ಗನ್‌ ಮ್ಯಾನ್‌ಗಳನ್ನು ಪೊಲೀಸ್ ಇಲಾಖೆ ನಿಯೋಜಿಸಿದೆ. ಅಲ್ಲದೆ ಜಯನಗರದಲ್ಲಿರುವ ಆತನ ಮನೆಗೆ ಸಹ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಪಾಳಿಯ ಮೇರೆಗೆ ದಿನದ 24 ತಾಸು ಶ್ರೀಕಿಗೆ ಇಬ್ಬರು ಪೊಲೀಸರು ಭದ್ರತೆಯಲ್ಲಿರುತ್ತಾರೆ. ಆದರೆ ಶ್ರೀಕಿಯನ್ನು ಕಾಯೋದೆ ಅವರಿಗೆ ತಲೆನೋವಾಗಿದೆ ಎನ್ನಲಾಗಿದೆ.

ಮನೆಯಿಂದ ಎಲ್ಲಿಗೆ ಹೋದರೂ ಶ್ರೀಕಿಯನ್ನು ಗನ್‌ ಮ್ಯಾನ್ ಹಿಂಬಾಲಿಸಬೇಕಿದೆ. ಆದರೆ ಕೆಲವು ಬಾರಿ ಗನ್‌ ಮ್ಯಾನ್‌ ದಿಕ್ಕು ತಪ್ಪಿಸಿ ಶ್ರೀಕಿ ಓಡಾಡುತ್ತಾನೆ. ಸುರಕ್ಷತೆ ಬಗ್ಗೆ ಆತನಿಗೆ ಹೇಳಿದರೂ ಸಹ ಕೇಳುವುದಿಲ್ಲ ಎಂದು ಮೂಲಗಳು ಹೇಳಿವೆ.

ಕಳೆದ ಜನವರಿಯಲ್ಲಿ ರಾಜ್ಯ ಗುಪ್ತದಳದ ಶಿಫಾರಸಿನ ಮೇರೆಗೆ ಶ್ರೀಕಿ ಭದ್ರತೆಗೆ ಗನ್‌ ಮ್ಯಾನ್‌ ನಿಯೋಜಿಸಲಾಗಿದೆ. ಆತನ ಮೇಲೆ ನಿಗಾವಹಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ವೈಯಕ್ತಿಕ ಕಾರಣದಿಂದ ಬೇಸತ್ತು ಕಿರುತೆರೆ ಯುವ ನಟಿ ಆತ್ಮ*ತ್ಯೆ