ಕನ್ನಡಪ್ರಭ ವಾರ್ತೆ ಬೆಂಗಳೂರು
ಹೊಂಗಸಂಗ್ರದ ಪದ್ಮಜಾ (29) ಕೊಲೆಯಾದ ದುರ್ದೈವಿ. ಈ ಹತ್ಯೆ ಸಂಬಂಧ ಮೃತಳ ಪತಿ ಹರೀಶ್ ಕುಮಾರ್ನನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ದಿನಗಳ ಹಿಂದೆ ಮನೆಯಲ್ಲಿ ರಾತ್ರಿ ಕೌಟುಂಬಿಕ ವಿಚಾರಕ್ಕೆ ದಂಪತಿ ಮಧ್ಯೆ ಉಂಟಾದ ಜಗಳವು ಕೊಲೆಯಲ್ಲಿ ಅಂತ್ಯವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಏಳು ವರ್ಷಗಳ ಹಿಂದೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಪದ್ಮಜಾ ಹಾಗೂ ಹರೀಶ್ ವಿವಾಹವಾಗಿದ್ದು, ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ದಂಪತಿ ಬಿಇ ಪದವೀಧರರಾಗಿದ್ದು, ನಗರದಲ್ಲಿ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಆದರೆ ಇತ್ತೀಚೆಗೆ ಹರೀಶ್ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದ.ಕೌಟುಂಬಿಕ ವಿಷಯಗಳಿಗೆ ಸತಿ-ಪತಿ ಮಧ್ಯೆ ಮನಸ್ತಾಪವಾಗಿತ್ತು. ಇದಾದ ಬಳಿಕ ಮನೆಯಲ್ಲಿ ಸಣ್ಣಪುಟ್ಟ ವಿಚಾರಗಳಿಗೆ ಆತ ತಕರಾರು ತೆಗೆದು ಗಲಾಟೆ ಮಾಡುತ್ತಿದ್ದ. ಎರಡು ದಿನಗಳ ಹಿಂದೆ ಶಾಪಿಂಗ್ ಹೋದಾಗ ಕ್ಷುಲ್ಲಕ ಕಾರಣಕ್ಕೆ ಹರೀಶ್ ಜಗಳ ಮಾಡಿಕೊಂಡು ಮನೆಗೆ ಮರಳಿದ್ದ. ಅಂದು ರಾತ್ರಿ ಮತ್ತೆ ಮನೆಯಲ್ಲಿ ಆತ ಜಗಳ ಮುಂದುವರಿಸಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಹರೀಶ್, ತನ್ನ ಪತ್ನಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಹೊಡೆತದಿಂದ ಕೆಳಗೆ ಬಿದ್ದ ಪದ್ಮಜಾ ಕುತ್ತಿಗೆ ಮೇಲೆ ಕಾಲಿಟ್ಟು ಆತ ಅದುಮಿದ್ದಾನೆ. ಇದರಿಂದ ಉಸಿರುಗಟ್ಟಿ ಕೊನೆಯುಸಿರೆಳೆದಿದ್ದಾಳೆ.