*ನಿವೃತ್ತ ಸೈನಿಕನಾಗಿದ್ದ ಚನ್ನಬಸವಯ್ಯ ಖಾಸಗಿ ಕಂಪನಿಯಲ್ಲಿ ಕಾವಲುಗಾರ
*ವಿದ್ಯಾಭ್ಯಾಸ ಅರ್ಧಕ್ಕೆ ಮೊಟಕುಗೊಳಿಸಿದ್ದ ಪುತ್ರ, ಕೆಲಸವಿಲ್ಲದೆ ಅಲೆದಾಟ
*ಡ್ರಗ್ಸ್, ಮದ್ಯ ವ್ಯಸನಿಯಾಗಿದ್ದ ಪುತ್ರನಿಗೆ ತಂದೆಯಿಂದ ಬುದ್ಧವಾದ, ಕೊಲೆಕನ್ನಡಪ್ರಭ ವಾರ್ತೆ ಬೆಂಗಳೂರು
ತಿಗಳರಪಾಳ್ಯದ ಬಾಲಾಜಿನಗರದ ನಿವಾಸಿ ಅಮಿತ್ ಬಂಧಿತನಾಗಿದ್ದು, ಕ್ಷುಲ್ಲಕ ಕಾರಣಕ್ಕೆ ತನ್ನ ತಂದೆ ಚನ್ನಬಸವಯ್ಯ (61) ಮೇಲೆ ಸೋಮವಾರ ಸಂಜೆ ಹಲ್ಲೆ ನಡೆಸಿ ಆತ ಕೊಂದಿದ್ದ. ಈ ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ಸಂಜೆ 5 ಗಂಟೆಯಲ್ಲಿ ಸಹ ಮಗನಿಗೆ ಬುದ್ಧಿ ಮಾತು ಹೇಳಿದ್ದಾರೆ. ಆಗ ತಂದೆ-ಮಗನ ಮಧ್ಯೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೋಪಗೊಂಡ ಆರೋಪಿ, ತನ್ನ ತಂದೆಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಚನ್ನಬಸವಯ್ಯ ಅವರನ್ನು ಸಮೀಪದ ಆಸ್ಪತ್ರೆಗೆ ಕುಟುಂಬ ಸದಸ್ಯರು ಕರೆದೊಯ್ದಿದ್ದಾರೆ. ಆದರೆ ತೀವ್ರ ರಕ್ತಸ್ರಾವದಿಂದ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.