ಕನ್ನಡಪ್ರಭ ವಾರ್ತೆ ಬೆಂಗಳೂರು
ಇದರ ಬೆನ್ನಲ್ಲೇ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಈ ಶಾಲೆಗೆ ಸರ್ಕಾರ ನೀಡಿರುವ ನಿರಾಕ್ಷೇಪಣಾ ಪತ್ರ ಹಿಂಪಡೆಯಲು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದೆ.
ಸಿಂಧಿ ಶಾಲೆಯಲ್ಲಿ ವಿದ್ಯಾರ್ಥಿಗಳು ಕನ್ನಡ ಮಾತನಾಡಿದರೆ ದಂಢ ವಿಧಿಸುತ್ತಿರುವ ಬಗ್ಗೆ ತಮಗೆ ದೂರು ಬಂದ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು ಶಿಕ್ಷಣ ಇಲಾಖೆಯ ಬೆಂಗಳೂರು ಉತ್ತರ ವಲಯ ಉಪನಿರ್ದೇಶಕರಿಗೆ (ಡಿಡಿಪಿಐ) ಪತ್ರ ಬರೆದು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿ ವರದಿ ನೀಡಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಡಿಪಿಐ ನೇತೃತ್ವದಲ್ಲಿ ಇಲಾಖೆಯ ಇನ್ನಿತರೆ ಅಧಿಕಾರಿಗಳ ತಂಡ ಸಿಂಧಿ ಶಾಲೆಗೆ ಭೇಟಿ ನೀಡಿದಾಗ ಶಾಲೆಯಲ್ಲಿ ಕನ್ನಡ ವಿರೋಧಿ ಧೋರಣೆ ಅನುಸರಿಸುತ್ತಿರುವುದು ಸಾಬೀತಾಗಿದೆ.ಶಾಲೆ ವಿದ್ಯಾರ್ಥಿಗಳು ಹಾಗೂ ಕೆಲ ಶಿಕ್ಷಕರೇ ಕನ್ನಡ ಮಾತನಾಡಿದರೆ ದಂಡ ವಿಧಿಸುತ್ತಿರುವ ವಿಷಯವನ್ನು ಬಹಿರಂಗಪಡಿಸಿ ಲಿಖಿತವಾಗಿಯೂ ಮಾಹಿತಿ ನೀಡಿದ್ದಾರೆ. ಅಲ್ಲದೆ, ದಂಡ ವಿಧಿಸುತ್ತಿರುವುದು ನಿಜ ಎಂಬುದನ್ನು ಶಾಲೆಯ ಪ್ರಾಂಶುಪಾಲರೂ ಅಧಿಕಾರಿಗಳ ಮುಂದೆ ಒಪ್ಪಿಕೊಂಡಿದ್ದಾರೆ. ಹಾಗಾಗಿ ಈ ಸಂಬಂಧ ಸುದೀರ್ಘ ವರದಿಯನ್ನು ಡಿಡಿಪಿಐ ಅವರು ಪ್ರಾಧಿಕಾರಕ್ಕೆ ಪತ್ರದ ಮೂಲಕ ಮಾಹಿತಿ ನೀಡಿದ್ದಾರೆ. ಈ ವರದಿ ಆಧರಿಸಿ ಪ್ರಾಧಿಕಾರವು ಶಾಲೆಯ ಎನ್ಒಸಿ ರದ್ದುಪಡಿಸಲು ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿರುವುದು ಬೆಳಕಿಗೆ ಬಂದಿದೆ.
ಸಿಂಧಿ ಶಾಲೆಯಲ್ಲಿ ಕನ್ನಡ ಮಾತನಾಡಿದ ವಿದ್ಯಾರ್ಥಿಗಳಿಗೆ ದಂಡ ವಿಧಿಸುತ್ತಿರುವುದು ಶಾಲೆಗೆ ಭೇಟಿ ನೀಡಿ ವಿಚಾರಣೆ ನಡೆಸಿದ ವೇಳೆ ಸಾಬೀತಾಗಿರುವುದರಿಂದ ಬೆಂಗಳೂರು ಉತ್ತರ ವಲಯ ಡಿಡಿಪಿಐ ಶಾಲಾ ಆಡಳಿತ ಮಂಡಳಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿರುವುದಾಗಿ ತಿಳಿಸಿದ್ದಾರೆ.