ಕನ್ನಡಪ್ರಭ ವಾರ್ತೆ ಬೆಂಗಳೂರು
ರಿಚ್ಮಂಡ್ ಟೌನ್ನ ಅಮೀರ್ ಖಾನ್ (35) ಬಂಧಿತ ಡ್ರಗ್ಸ್ ಪೆಡ್ಲರ್. ಈತ ಕಳೆದ ಮೂರು ವರ್ಷಗಳಿಂದ ಕೇರಳ ಮತ್ತು ಆಂಧ್ರಪ್ರದೇಶದಿಂದ ಗಾಂಜಾ ಮತ್ತು ಇತರೆ ಮಾದಕವಸ್ತುಗಳನ್ನು ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಈ ಹಿಂದೆ ಸಿಸಿಬಿ ಪೊಲೀಸರು ಮೂರು ಬಾರಿ ಮಾಲು ಸಹಿತ ಬಂಧಿಸಿದ್ದರು. ಅಶೋಕನಗರ, ಪರಪ್ಪನ ಅಗ್ರಹಾರ, ಬೇಗೂರು, ಗೋವಿಂದಪುರ ಪೊಲೀಸ್ ಠಾಣೆಗಳಲ್ಲಿ ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಲಾಗಿತ್ತು.
ಜಾಮೀನು ಪಡೆದು ಹೊರಗೆ ಬಂದಿದ್ದ ಆರೋಪಿಯು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡು ಮಾದಕವಸ್ತು ಮಾರಾಟ ದಂಧೆ ಮುಂದುವರೆಸಿದ್ದ. 2021ರಿಂದ 2023ರ ರವರೆಗೆ ಈತನ ವಿರುದ್ಧ ಐದು ಪ್ರಕರಣಗಳು ದಾಖಲಾಗಿವೆ.ಇತ್ತೀಚೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಆರೋಪಿ ಅಮಿರ್ ಖಾನ್ನನ್ನು ಬಂಧಿಸಿದ್ದರು. ಈಶಾನ್ಯ ವಿಭಾಗದ ಡಿಸಿಪಿ ಅವರ ಸೂಚನೆ ಮೇರೆಗೆ ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಪ್ರತಿಬಂಧಕ ಬಂಧನದಲ್ಲಿರಿಸಲು ಪೂರಕ ದಾಖಲೆಗಳೊಂದಿಗೆ ಪೊಲೀಸ್ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಅದರಂತೆ ನಗರ ಪೊಲೀಸ್ ಆಯುಕ್ತರು ಈತನ ಬಂಧನಕ್ಕೆ ಆದೇಶಿಸಿದ್ದರು. ಈ ಆದೇಶದ ಮೇರೆಗೆ ಅಮೃತಹಳ್ಳಿ ಠಾಣೆ ಪೊಲೀಸರು ಫೆ.19ರಿಂದ ಅನ್ವಯವಾಗುವಂತೆ ಪಿಐಟಿ-ಎನ್ಡಿಪಿಎಸ್ ಕಾಯ್ದೆಯಡಿ ಪ್ರತಿಬಂಧಕ ಬಂಧನ ಜಾರಿಗೊಳಿಸಿದ್ದಾರೆ.ಏನಿದು ಪಿಐಟಿ-ಎನ್ಡಿಪಿಎಸ್ ಕಾಯ್ದೆ?