ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಹಾರದ ದೀಪಕ್ ಕುಮಾರ್ ಅಲಿಯಾಸ್ ದೀಪಕ್ ಮೆಹ್ತಾ, ಅಮರನಾಥ್ ಜೈಸ್ವಾಲ್ ಅಲಿಯಾಸ್ ಮಿಶ್ರಾ, ರಾಜಸ್ಥಾನದ ಶಂಕರ್ ಲಾಲ್ ಅಲಿಯಾಸ್ ಅಜಯ್, ಒಡಿಶಾದ ಅನಿರುದ್ಧ್ ದಲೈ ಅಲಿಯಾಸ್ ಸೋನು, ಜಾರ್ಖಂಡ್ನ ಬಸಂತ್ ಕುಮಾರ್ ಹಾಗೂ ಅಜಿತ್ ಕುಮಾರ್ ಸಿಂಗ್ ಅಲಿಯಾಸ್ ವಿಫುಲ್ ಬಾಯ್ ಬಂಧಿತರು. ಆರೋಪಿಗಳಿಂದ 53.5 ಕೆಜಿ ಗಾಂಜಾ, 9 ಮೊಬೈಲ್, 10 ಸಿಮ್ ಕಾರ್ಡ್ಗಳು, ಲ್ಯಾಪ್ಟಾಪ್ ಹಾಗೂ ಸರಕು ಸಾಗಾಣೆ ಆಟೋ ಸೇರಿ 42 ಲಕ್ಷ ರು. ಮೌಲ್ಯದ ವಸ್ತುಗಳು ಜಪ್ತಿಯಾಗಿವೆ.
ಕಾಟನ್ಪೇಟೆಯ ಪಶುವೈದ್ಯ ಆಸ್ಪತ್ರೆ ಸಮೀಪ ಗೂಡ್ಸ್ ಆಟೋದಲ್ಲಿ ಅಕ್ರಮವಾಗಿ ಗಾಂಜಾ ಸಾಗಿಸುವ ಬಗ್ಗೆ ಖಚಿತ ಮಾಹಿತಿ ಪಡೆದು ಇನ್ಸ್ಪೆಕ್ಟರ್ ಇ.ಯರ್ರಿಸ್ವಾಮಿ ನೇತೃತ್ವದ ದಾಳಿ ನಡೆಸಿದೆ.ಗಾಂಜಾ ಮಾರಾಟ ದಂಧೆ ಹೇಗೆ?
ಈ ಆರೋಪಿಗಳ ಪೈಕಿ ಬಹುತೇಕರಿಗೆ ಕೊರಿಯರ್ ಕಂಪನಿಗಳಲ್ಲಿ ಕೆಲಸ ಮಾಡಿದ್ದ ಅನುಭವವಿತ್ತು. ಇದೇ ಕೊರಿಯರ್ ಕಂಪನಿಗಳ ಮೂಲಕ ಅವರೆಲ್ಲ ಪರಸ್ಪರ ಪರಿಚಿತರಾಗಿ ಗಾಂಜಾ ಮಾರಾಟಕ್ಕೆ ಸಂಘಟಿತವಾಗಿ ಕೆಲಸ ಮಾಡುತ್ತಿದ್ದರು. ಅಲ್ಲದೆ ಬಂಧನಕ್ಕೂ ಮುನ್ನ ಸಹ ದೆಹಲಿಯಲ್ಲಿ ಕಾರ್ಗೋ ಕಂಪನಿಯಲ್ಲಿ ಬಿಹಾರ ಮೂಲದ ದೀಪಕ್ ನೌಕರಿಯಲ್ಲಿದ್ದ. ಹಾಗಾಗಿ ಗಾಂಜಾ ಸಾಗಾಣಿಕೆಗೆ ನಕಲಿ ಜಿಎಸ್ಟಿ ಬಿಲ್ ಸೃಷ್ಟಿಯಲ್ಲಿ ಆತನ ಪಾತ್ರ ಪ್ರಮುಖವಾಗಿತ್ತು ಎಂದು ಹೇಳಲಾಗಿದೆ.
ಈ ಆರೋಪಿಗಳ ಬಂಧನಕ್ಕೆ ದೆಹಲಿ, ಆಂಧ್ರಪ್ರದೇಶ, ಮಹಾರಾಷ್ಟ್ರ, ತೆಲಂಗಾಣ, ಜಾರ್ಖಂಡ್ ರಾಜ್ಯದ ಪೊಲೀಸರು ಹಾಗೂ ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕದ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಆರೇಳು ತಿಂಗಳಿಂದ ಈ ಜಾಲವು ಗಾಂಜಾ ಸಾಗಾಣಿಕೆ ಕಾರ್ಯಾಚರಣೆ ನಡೆಸಿದ ಬಗ್ಗೆ ಮಾಹಿತಿ ಇದೆ. ಈ ಜಾಲದ ಶೋಧನಾ ಕಾರ್ಯ ಮುಂದುವರಿದಿದ್ದು, ಮತ್ತಷ್ಟು ಗಾಂಜಾ ಜಪ್ತಿಯಾಗಬಹುದು. ಈ ಆರೋಪಿಗಳ ಪೈಕಿ ಬಿಹಾರದ ಅಮರನಾಥ್ ಜೈಸ್ವಾಲ್ ವಿರುದ್ಧ ಈ ಹಿಂದೆ ಬಿಹಾರದಲ್ಲಿ ಗಾಂಜಾ ಪ್ರಕರಣ ದಾಖಲಾಗಿತ್ತು. ಇನ್ನುಳಿದವರು ಇದೇ ಮೊದಲ ಬಾರಿಗೆ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.