ಕನ್ನಡಪ್ರಭ ವಾರ್ತೆ ನಾಗಮಂಗಲ
ಗೂಡ್ಸ್ ವಾಹನದಲ್ಲಿದ್ದ ಪಶ್ಚಿಮ ಬಂಗಾಳ ಮೂಲದ ಸುಜಮ್ರಾಮ್ (27) ಹಾಗೂ ಸುಜನ್ ಬರ್ಬನ್ (32) ಘಟನೆಯಲ್ಲಿ ಮೃತಪಟ್ಟವರು. ಚಾಲಕ ರಮೇಶ್ಗೆ ಗಾಯಗಳಾಗಿವೆ.
ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿಯ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಸುಜಮ್ರಾಮ್ ಹಾಗೂ ಸುಜನ್ ಬರ್ಬನ್ ನೀರು ತುಂಬಿದ ಬಾಟಲ್ಗಳನ್ನು ಪೂರೈಸುವ ಸಲುವಾಗಿ ಶನಿವಾರ ರಾತ್ರಿ ಬೆಳ್ಳೂರು ಕ್ರಾಸ್ ಮಾರ್ಗವಾಗಿ ನಾಗಮಂಗಲ ಪಟ್ಟಣಕ್ಕೆ ಗೂಡ್ಸ್ ವಾಹನದಲ್ಲಿ ಬರುತ್ತಿದ್ದರು.ಈ ವೇಳೆ ಗೂಡ್ಸ್ ವಾಹನ ಚಾಲಕ ರಮೇಶ್ ಇದೇ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನವನ್ನು ಹಿಂದಿಕ್ಕುವ ಭರದಲ್ಲಿ ಹುಣಸೂರಿನಿಂದ ರಾಯಚೂರಿಗೆ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ, ಎಎಸ್ಪಿ ತಿಮ್ಮಯ್ಯ, ಡಿವೈಎಸ್ಪಿ ಬಿ.ಚಲುವರಾಜು ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಭಾನುವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಮೃತದೇಹಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಘಟನೆ ಸಂಬಂಧ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.