ಕನ್ನಡಪ್ರಭ ವಾರ್ತೆ ಬೆಂಗಳೂರು
ದೊಡ್ಡಬೊಮ್ಮಸಂದ್ರ ನಿವಾಸಿಗಳಾದ ಪ್ರಕಾಶ್ ಮತ್ತು ಮಧು ಬಂಧಿತ ದಂಪತಿ. ಆರೋಪಿಗಳಿಂದ 2 ಲಕ್ಷ ರು.ನಗದು, 4 ಮೊಬೈಲ್ ಫೋನ್ಗಳು, ದ್ವಿಚಕ್ರ ವಾಹನ, ಆರು ಬ್ಯಾಂಕ್ ಖಾತೆಗಳಿಗೆ ಸೇರಿದ 15 ಕ್ರೆಡಿಟ್ ಕಾರ್ಡ್, ಡೆಬಿಟ್ ಕಾರ್ಡ್, ಚೆಕ್ಬುಕ್ಗಳು, 11 ಕೈಗಡಿಯಾರ ಹಾಗೂ ನಕಲಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಯುವಕನೊಬ್ಬನಿಗೆ ಸರ್ಕಾರಿ ಸ್ವಾಮ್ಯದ ಸಂಸ್ಥೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸಕ್ಕೆ ಸೇರಿಸಿ ಬಳಿಕ ಕಾಯಂ ಗೊಳಿಸುವ ಭರವಸೆ ನೀಡಿ 6 ಲಕ್ಷ ರು. ಪಡೆದಿದ್ದರು. ನಂತರ ಕಾಯಂ ಉದ್ಯೋಗ ಕೊಡಿಸದೆ ತಲೆಮರೆಸಿಕೊಂಡಿದ್ದರು. ಸಂಬಂಧ ನೊಂದ ಯುವಕ ದೂರು ನೀಡಿದ್ದರು. ಈ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ದಂಪತಿಯನ್ನು ಬಂಧಿಸಲಾಗಿದೆ.ನಿರುದ್ಯೋಗಿಗಳೇ ಟಾರ್ಗೆಟ್:
ಮೂರು ಪ್ರಕರಣ ಪತ್ತೆ:
ದಂಪತಿಯ ಬಂಧನದಿಂದ ವಿದ್ಯಾರಣ್ಯಪುರ ಠಾಣೆಯಲ್ಲಿ ದಾಖಲಾಗಿದ್ದ ಮೂರು ವಂಚನೆ ಪ್ರಕರಣಗಳು ಪತ್ತೆಯಾಗಿವೆ. ಅಂತೆಯೆ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಆರೋಪಿಗಳ ವಿರುದ್ಧ ವಂಚನೆ ಪ್ರಕರಣಗಳು ದಾಖಲಾಗಿರುವ ಸಾಧ್ಯತೆಯಿದ್ದು, ಹೆಚ್ಚಿನ ತನಿಖೆ ಬಳಿಕ ಮತ್ತಷ್ಟು ಮಾಹಿತಿ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.