ಎಸ್ಸಿ,ಎಸ್ಟಿ ದೌರ್ಜನ್ಯ ಕೇಸ್‌ ಡಿಸಿಆರ್‌ಇ ಕಾರ್ಯನಿರ್ವಹಣೆ ಬಗ್ಗೆ ಮಾರ್ಗಸೂಚಿ

KannadaprabhaNewsNetwork |  
Published : Jul 15, 2025, 01:00 AM ISTUpdated : Jul 15, 2025, 07:28 AM IST
Dr Ma Saleem

ಸಾರಾಂಶ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ತನಿಖೆಗೆ ಸ್ಥಾಪಿಸಲಾಗಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಗಳ ಕಾರ್ಯ ನಿರ್ವಹಣೆ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.

 ಬೆಂಗಳೂರು :  ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ಕುರಿತು ತನಿಖೆಗೆ ಸ್ಥಾಪಿಸಲಾಗಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಠಾಣೆಗಳ ಕಾರ್ಯ ನಿರ್ವಹಣೆ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ.

ಭಾರತ ಸಂವಿಧಾನದ ಅನುಚ್ಛೇದ 17ರಲ್ಲಿ ಅಸ್ಪೃಶ್ಯತೆಯನ್ನು ರದ್ದುಪಡಿಸಲಾಗಿದೆ. ಯಾವುದೇ ರೂಪದಲ್ಲಿ ಅಸ್ಪೃಶ್ಯತೆಯ ಆಚರಣೆ ಈಗ ಅಪರಾಧವಾಗಿದ್ದು, ಕಾನೂನು ಅಡಿ ಶಿಕ್ಷಾರ್ಹವಾಗಿದೆ ಎಂದು ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

ಮಾರ್ಗಸೂಚಿ:

1.ಎಸ್‌ಡಿಪಿಒ ನಡೆಸುತ್ತಿದ್ದ ಪ. ಜಾತಿ ಮತ್ತು ಪಂಗಡದವರ ವಿರುದ್ಧದ ದೌರ್ಜನ್ಯ ಪ್ರಕರಣಗಳ ತನಿಖೆಯನ್ನು ಇನ್ನು ಮುಂದೆ ಡಿಸಿಆ‌ರ್‌ಇ ಠಾಣೆಗಳಿಗೆ ಹಸ್ತಾಂತರಿಸಲಾಗುತ್ತದೆ. ಸರಹದ್ದಿನ ಪೊಲೀಸ್ ಠಾಣೆ ಮತ್ತು ಡಿಸಿಆ‌ರ್‌ಇ ಠಾಣೆಗಳ ನಡುವೆ ಉತ್ತಮ ಸಮನ್ವಯತೆಯ ಅವಶ್ಯಕತೆ ಇರಬೇಕು.

2.ಪ. ಜಾತಿ ಮತ್ತು ಪಂಗಡದವರ ಸೇರಿದ ಯಾವುದೇ ವ್ಯಕ್ತಿಯಿಂದ ಅಕ್ರಮದ ಬಗ್ಗೆ ದೂರು ಸ್ವೀಕರಿಸಿದಾಗ, ಸರಹದ್ದಿನ ಪೊಲೀಸ್ ಠಾಣೆಯ ಪ್ರಭಾರದಲ್ಲಿರುವ ಅಧಿಕಾರಿ ತಕ್ಷಣವೇ ಎಫ್‌ಐಆರ್ ದಾಖಲಿಸಬೇಕು. ಬಳಿಕ ಪ್ರಕರಣದ ಕುರಿತು ಮೇಲಾಧಿಕಾರಿ ಮತ್ತು ಐಜಿಪಿ ಹಾಗೂ ಪ್ರಧಾನ ಕಚೇರಿಗೆ ವರದಿ ಮಾಡಬೇಕು.

3.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ನಿಯಮಗಳು,1995 ರ ನಿಯಮ 7 ರಂತೆ ತನಿಖಾಧಿಕಾರಿಯನ್ನು ಎಸ್ಪಿ ಅಥವಾ ಘಟಕದ ಮುುಖ್ಯಸ್ಥರು ನೇಮಿಸಬೇಕು. ಡಿಸಿಆ‌ರ್‌ಇಗೆ ಪ್ರಕರಣ ವರ್ಗಾವಣೆ ಆಗುವವರೆಗೆ ತನಿಖೆ ನಡೆಯಬೇಕು. ಬಳಿಕ ಮೇಲಾಧಿಕಾರಿಗಳಿಂದ ಮಾಹಿತಿ ಪಡೆದು ಡಿಸಿಆರ್‌ಇ ತನಿಖಾಧಿಕಾರಿ ಪ್ರಕರಣ ಪಡೆಯಬೇಕು. ನಂತರ ಡಿಸಿಆರ್‌ಇಗೆ ವಿವರಗಳನ್ನು ಲಿಖಿತ ರೂಪದಲ್ಲಿ ಸ್ಥಳೀಯ ಪೊಲೀಸರು ನೀಡಬೇಕು.

7.ಸಂವಿಧಾನಾತ್ಮಕವಾಗಿ ಪ. ಜಾತಿ ಮತ್ತು ಪಂಗಡಗಳ ಸುರಕ್ಷತೆಗೆ ಸಂಬಂಧಿತ ಮಾಹಿತಿ ಮತ್ತು ಗುಪ್ತವಾರ್ತೆಗಳು ಡಿಸಿಆರ್‌ಇ ಠಾಣೆಗಳಿಗೆ ಲಭ್ಯವಿರಬೇಕು.

8.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸೇರಿದ ಯಾವುದೇ ವ್ಯಕ್ತಿ ತಮ್ಮ ಅಹವಾಲುಗಳನ್ನು ಸಾಮಾನ್ಯ ಪೊಲೀಸ್ ಠಾಣೆಗೆ ನೀಡಿದಾಗ ಅಂತಹ ಅರ್ಜಿಯನ್ನು ವೈಯಕ್ತಿಕವಾಗಿ ಪರಿಶೀಲಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಲು ಡಿಸಿಆರ್‌ಇ ಪೊಲೀಸ್ ಠಾಣೆಗೆ ಕಳುಹಿಸಬೇಕು.

9.ಡಿಸಿಆರ್‌ಇ ಪೊಲೀಸ್ ಠಾಣೆಗಳ ಸ್ಥಾಪನೆಯು ಪ. ಜಾತಿ ಮತ್ತು ಪಂಗಡದವರ ಮೇಲಿನ ದೌರ್ಜನ್ಯದಿಂದ ಸಂಭವಿಸಬಹುದಾದ ಕಾನೂನು ಮತ್ತು ಸುವ್ಯವಸ್ಥೆ ಸಂಬಂಧಿತ ಹೊಣೆಗಾರಿಕೆಯಿಂದ ಸ್ಥಳೀಯ ಪೊಲೀಸರು ಮುಕ್ತರಾಗಿಲ್ಲ.

10.ಪ. ಜಾತಿ ಮತ್ತು ಪಂಗಡದವರ ರಕ್ಷಣೆಗೆ ಸಂಬಂಧಿಸಿದ ಸಂವಿಧಾನಾತ್ಮಕ ಉಪಬಂಧಗಳನ್ನು ಅನುಷ್ಠಾನಗೊಳಿಸುವ ಕಾರ್ಯವನ್ನು ನಿರ್ವಹಿಸಲು ಡಿಸಿಆರ್‌ಇ ಕೆಲಸ ಮಾಡಬೇಕು. ಈ ಸಂಬಂಧ ಕಾಲಕಾಲಕ್ಕೆ ಸೂಕ್ತ ನಿರ್ದೇಶನಗಳನ್ನು ಡಿಸಿಆರ್‌ಇ ಘಟಕದ ಮುಖ್ಯಸ್ಥರು ಹೊರಡಿಸಬಹುದು.

11.ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಂಬಂಧಿಸಿದ ಎಲ್ಲ ವಿಷಯಗಳ ಬಗ್ಗೆ ಘಟಕಾಧಿಕಾರಿಗಳು ಪೊಲೀಸ್ ಪ್ರಧಾನ ಕಛೇರಿ ಮತ್ತು ಡಿಸಿಆರ್‌ಇ ಮುಖ್ಯ ಕಚೇರಿಗೆ ನಿರಂತರವಾಗಿ ಮಾಹಿತಿ ಹಂಚಿಕೊಳ್ಳಬೇಕು.

12. ಈ ಎಲ್ಲ ನಿರ್ದೇಶನಗಳನ್ನು ಪಾಲನೆಯಾಗುವಂತೆ ಎಲ್ಲ ಘಟಕಾಧಿಕಾರಿಗಳು ಕ್ರಮವಹಿಸುವುದು ಹಾಗೂ ತಮ್ಮ ಅಧೀನದಲ್ಲಿರುವ ಎಲ್ಲ ಅಧಿಕಾರಿಗಳಿಗೆ ಈ ನಿರ್ದೇಶನಗಳನ್ನು ಪಾಲಿಸುವಂತೆ ಸೂಕ್ತ ತಿಳಿವಳಿಕೆ ನೀಡಬೇಕು.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಅಕ್ರಮ ಕೃತ್ಯಗಳಿಗೆ ‘ದಂಡ’ ವಿಧಿಸಿ ಮುಚ್ಚು ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌