ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದ ಜಾಂಬವ ಯುವ ಸೇನೆ ಸದಸ್ಯರು
ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಮದ್ಲಾಪುರ ಗ್ರಾಮದ ಸಾಮಾಜಿಕ ಹೋರಾಟಗಾರ ದಲಿತ ಮುಖಂಡನ ಹತ್ಯೆಗೈದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಜಾಂಬವ ಯುವ ಸೇನೆ ಸದಸ್ಯರು ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಹಣಮಂತ ಎಂ. ಬಿಲ್ಲವ್, ಮಾನವಿ ತಾಲೂಕಿನ ಮದ್ದಾಮರ ಗ್ರಾಮದ ಸಾಮಾಜಿಕ ಹೋರಾಟಗಾರ, ದಲಿತ ಮುಖಂಡ ಪ್ರಸಾದ ಮದ್ದಾಪೂರ ಅವರನ್ನು ತೋಟಕ್ಕೆ ಹೋಗುವ ದಾರಿಯ ಮಧ್ಯದಲ್ಲಿ ತಡೆದು ಕೆಲ ಕಿಡಿಗೇಡಿಗಳು ಮಾರಾಕಾಸ್ತ್ರಗಳಿಂದ ಹತ್ಯೆ ಮಾಡಿ ಕೊಲೆಗೈದಿದ್ದಾರೆ. ಈ ಘಟನೆಯನ್ನು ಡಿಎಸ್ಎಂ ರಮೇಶ ಚಕ್ರವರ್ತಿ ಸಂಸ್ಥಾಪಕರು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ರಚಿತವಾದ ಯಾದಗಿರಿ ಜಿಲ್ಲೆ ಜಾಂಬವ ಯುವ ಸೇನೆ ತೀವ್ರವಾಗಿ ಖಂಡಿಸುತ್ತದೆ ಎಂದರು.ರಾಜ್ಯದಲ್ಲಿ ದಲಿತ ಹೋರಾಟಗಾರರು, ಸಾಹಿತಿಗಳು, ಭಯದಲ್ಲಿದ್ದಾರೆ. ಇಂತಹ ಪ್ರಕರಣಗಳು ಮೇಲಿಂದ ಮೇಲೆ ಆಗುತ್ತಿರುವುದು ಆತಂಕವನ್ನು ಉಂಟು ಮಾಡುತ್ತಿದೆ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಆದ್ದರಿಂದ ರಾಜ್ಯದ ಗೃಹ ಸಚಿವರು ಕಠಿಣವಾದ ಕಾನೂನನ್ನು ಜಾರಿಗೆ ತರಬೇಕು.
ಉಪಾಧ್ಯಕ್ಷ ಅಯ್ಯಪ್ಪ ಟಿ. ಬಿಲ್ಲವ, ಪ್ರಧಾನ ಕಾರ್ಯದರ್ಶಿ ಸಂತೋಷ್ ಮ್ಯಾತಿ, ಸಂಘಟನೆ ಕಾರ್ಯದರ್ಶಿ ದೇವಿಂದ್ರಪ್ಪ ಶಾಂತಗಿರಿ ಹೇಮನೂರು, ಸಹಕಾರ್ಯದರ್ಶಿ ಯಲ್ಲಪ್ಪ ಆರ್ಗ, ಸುರಪುರ ತಾಲೂಕಾಧ್ಯಕ್ಷ ಮರೆಪ್ಪ ಪುಜಾರಿ, ಉಪಾಧ್ಯಕ್ಷ ಭೀಮಣ್ಣ ಖಂಡ್ರೆ, ಖಜಾಂಚಿ ಕೃಷ್ಣಾ ಕಡಿಮನಿ, ಹುಣಸಗಿ ತಾಲೂಕಾಧ್ಯಕ್ಷ ಪರಮಣ್ಣ ದೊಡ್ಮನಿ, ವಡಗೇರಾ ತಾಲೂಕಾಧ್ಯಕ್ಷ ಕಿರಣ ಇತರರಿದ್ದರು.
5ವೈಡಿಆರ್8:
- - - -