ಸಾಲಬಾಧೆ: ದೇವೀರಮ್ಮಣ್ಣಿ ಕೆರೆಗೆ ಹಾರಿ ರೈತ ಆತ್ಮಹತ್ಯೆ

KannadaprabhaNewsNetwork |  
Published : May 14, 2026, 12:45 AM IST
13ಕೆಎಂಎನ್ ಡಿ20 | Kannada Prabha

ಸಾರಾಂಶ

ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ದೇವೀರಮ್ಮಣ್ಣಿ ಕೆರೆಯಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಲೂಕಿನ ಕರೋಟಿ ಗ್ರಾಮದ ರೈತ ವೆಂಕಟೇಶ್ ಪುತ್ರ ದೇವರಾಜು ಮೃತ ರೈತ.

ಕೆ.ಆರ್.ಪೇಟೆ:

ಸಾಲಬಾಧೆ ತಾಳಲಾರದೆ ಕೆರೆಗೆ ಹಾರಿ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪಟ್ಟಣದ ದೇವೀರಮ್ಮಣ್ಣಿ ಕೆರೆಯಲ್ಲಿ ನಡೆದಿದೆ. ತಾಲೂಕಿನ ಕರೋಟಿ ಗ್ರಾಮದ ರೈತ ವೆಂಕಟೇಶ್ ಪುತ್ರ ದೇವರಾಜು (45) ಮೃತ ರೈತ.

ಪಟ್ಟಣದ ದೇವೀರಮ್ಮಣ್ಣಿ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ಅಪರಿಚಿತ ವ್ಯಕ್ತಿಯ ಶವ ಕಂಡು ಬಂದಿತ್ತು. ತನಿಖೆ ನಡೆಸಿದ ಪೋಲೀಸರಿಗೆ ಇದು ತಾಲೂಕಿನ ಕರೋಟಿ ಗ್ರಾಮದ ರೈತ ದೇವರಾಜು ಅವರ ಶವ ಎನ್ನುವುದು ಪತ್ತೆಯಾಯಿತು.

ಆತ್ಮಹತ್ಯೆ ಮಾಡಿಕೊಂಡ ದೇವರಾಜುಗೆ ಸ್ವಗ್ರಾಮ ವ್ಯಾಪ್ತಿಯಲ್ಲಿ ಒಂದು ಎಕರೆ ಕೃಷಿ ಭೂಮಿ ಇದ್ದು ಕಬ್ಬು ಮತ್ತಿತರ ಬೆಳೆ ಬೆಳೆಯುತ್ತಿದ್ದ. ಕೃಷಿ ಭೂಮಿಯಲ್ಲಿ ಅಂತರ್ಜಲ ಮಟ್ಟ ಕುಸಿದು ನಾಲ್ಕಾರು ಬೋರ್ ಕೊರೆಸಿದರೂ ಸಮರ್ಪಕ ನೀರು ಬರಲಿಲ್ಲ. ಬೋರ್ ಕೊರೆಸಲು ಮತ್ತು ಕೃಷಿ ಚಟುವಟಿಗಳನ್ನು ನಿರ್ವಹಿಸಲು ಮೃತ ದೇವರಾಜು ಖಾಸಗಿ ವ್ಯಕ್ತಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿಂದ ಸುಮಾರು 10 ಲಕ್ಷಕ್ಕೂ ಅಧಿಕ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.

ಕೊಳವೆ ಬಾವಿಯಲ್ಲಿ ಸಮರ್ಪಕ ನೀರು ಬಾರದೆ ಕಿನ್ನತೆಗೆ ಒಳಗಾಗಿದ್ದ ದೇವರಾಜು ಸಾಲದ ಬಾಧೆ ತಾಳಲಾರದೆ ಮನನೊಂದು ಪಟ್ಟಣದ ದೇವೀರಮ್ಮಣ್ಣಿ ಕೆರೆಗೆ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ದೇವರಾಜು ಪತ್ನಿ, ಓರ್ವ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾನೆ.

ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕುಟುಂಬಕ್ಕೆ ಆಧಾರವಾಗಿದ್ದ ದೇವರಾಜು ಕಳೆದುಕೊಂಡ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿತ್ತು. ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ವ್ಯಕ್ತಿ ಕೊಲೆಗೈದಿದ್ದ ಆರು ಮಂದಿ ಆರೋಪಿಗಳ ಬಂಧನ
ಪಾಂಡವಪುರ ಕುಂತಿಬೆಟ್ಟದ ಬಯಲು ಪ್ರದೇಶದಲ್ಲಿ ಒರಿಸ್ಸಾ ಗಾಂಜಾ ವಶ..!