ದೇಶದಲ್ಲೇ ಮೊದಲ ಪ್ರಯತ್ನ
ಈ ಸಾಧನಗಳನ್ನು ಈಗಾಗಲೇ ಪಾಶ್ಚಿಮಾತ್ಯ ದೇಶಗಳಲ್ಲಿ ಬಳಸಲಾಗುತ್ತಿದ್ದು, ಭಾರತದಲ್ಲಿ ಇದೇ ಮೊದಲ ಬಾರಿಗೆ ಬಳಕೆ ಮಾಡಲಾಗಿದೆ. ಘುಲಾಂ ಮೊಹಮ್ಮದ್ ಭಟ್ ಎಂಬ ವ್ಯಕ್ತಿಯ ಮಧ್ಯಂತರ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ, ಅವರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಿ ಜಾಮೀನು ಮಂಜೂರು ಮಾಡಿತು. ಭಟ್ ದೇಶದ್ರೋಹ ಪ್ರಕರಣದ ಅಡಿಯಲ್ಲಿ ಬಂಧಿತನಾಗಿದ್ದು, ಆತನಿಗೆ ಹಲವು ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕವಿರುವ ಶಂಕೆಯ ಮೇಲೆ ಬಂಧಿಸಲಾಗಿತ್ತು. ಪ್ರಸ್ತುತ ಈ ಸಾಧನವನ್ನು ದೇಶದ್ರೋಹ ಪ್ರಕರಣದಡಿ ಬಂಧಿತರಾಗುವ ಆರೋಪಿಗಳಿಗೆ ಮಾತ್ರ ಬಳಸಲು ನಿರ್ಧರಿಸಲಾಗಿದೆ. ಈ ಸಾಧನವನ್ನು ಆರೋಪಿಗಳ ಕಾಲಿಗೆ ಅಳವಡಿಸಿ ಅವರ ಚಲನವಲನದ ಮೇಲೆ ಜಿಪಿಎಸ್ ಸಹಾಯದಿಂದ ಮೇಲ್ವಿಚಾರಣೆ ಮಾಡಿಬಹುದಾಗಿದೆ.