ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ಕುರಿತು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸೇರಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೂ ದೂರು ನೀಡಿದ್ದು ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಸೂಕ್ತ ಬಂದೋಬಸ್ತ್ ಒದಗಿಸಿಲ್ಲ ಎಂದು ಟಿ.ಎ.ನಾರಾಯಣಗೌಡ ಅವರು ಆರೋಪಿಸಿದರು.
ಕರವೇ ಕಚೇರಿ ಮತ್ತು ನನ್ನ ಮನೆಯನ್ನು ಸ್ಪೋಟಿಸುವುದಾಗಿ ಬೆದರಿಕೆ ಕರೆ ಬಂದಿದೆ. ಅಲ್ಲದೇ ನನ್ನನ್ನು ಮತ್ತು ನನ್ನ ಮಕ್ಕಳನ್ನು ಗುಂಡಿಟ್ಟು ಕೊಲೆ ಮಾಡಲು ಮುಂಬೈಯಿಂದ ಒಂದು ತಂಡ ಬೆಂಗಳೂರಿಗೆ ಬಂದಿದೆ ಎಂದು ಬೆದರಿಯೊಡ್ಡಿದ್ದಾರೆ. ಮಾಲ್ ಆಫ್ ಏಷ್ಯಾ ತಂಟೆಗೆ ಹೋಗಬಾರದು, ಹೋದರೆ ಗುಂಡಿಟ್ಟು ಹೊಡೆಯುವುದಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೇವೆ. ಈವರೆಗೂ ಯಾವುದೇ ಕ್ರಮಕೈಗೊಂಡಿಲ್ಲ. ಯಾರು ಹಣವಂತರೋ ಅಂತವರ ಪರವಾಗಿ ಪೊಲೀಸ್ ಇಲಾಖೆ ಕೆಲಸ ಮಾಡುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.ಹೋರಾಟದಲ್ಲಿದ್ದ ನಮ್ಮನ್ನು ಮಧ್ಯಾಹ್ನ ಬಂಧಿಸಲಾಗಿತ್ತು. ರಾತ್ರಿಯಾದರೂ ಯಾರಿಗೂ ಊಟದ ವ್ಯವಸ್ಥೆ ಮಾಡಿಲ್ಲ. ಡಿಸಿಪಿ ಲಕ್ಷ್ಮಿಪ್ರಸಾದ್ ಎನ್ನುವ ಅಧಿಕಾರಿ ದೌರ್ಜನ್ಯ, ದಬ್ಬಾಳಿಕೆ ಮಾಡುತ್ತಿದ್ದು ಕೆಲವರ ಕೈ, ಕಾಲುಗಳನ್ನು ಮುರಿದಿದ್ದಾರೆ. ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆಯೂ ಇಲ್ಲಿಲ್ಲ. 35 ವರ್ಷ ಈ ನಾಡಿಗಾಗಿ ಹೋರಾಟ ಮಾಡಿದ್ದಕ್ಕೆ ಈ ಸರ್ಕಾರ ಕೊಡುವ ದೊಡ್ಡ ಕೊಡುಗೆ ಇದು ಎಂದು ಟೀಕಿಸಿದರು.ಸರ್ಕಾರದ ವಿರುದ್ಧ ಟೀಕಾ ಪ್ರಹಾರ