ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

KannadaprabhaNewsNetwork |  
Published : Nov 01, 2024, 12:30 AM ISTUpdated : Nov 01, 2024, 05:11 AM IST
Crime

ಸಾರಾಂಶ

ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ದಾಬಸ್‌ಪೇಟೆ: ಬೈಕಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 48ರ ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ನಡೆದಿದೆ. ತುಮಕೂರು ಮೂಲದ ಅಭಿಷೇಕ್ (28) ಮೃತ ದುರ್ದೈವಿಯಾಗಿದ್ದು, ಈತ ಬೆಂಗಳೂರಿಂದ ಮುದೋಳಕ್ಕೆ ತೆರಳುತ್ತಿದ್ದನು. 

ಕೆಂಗಲ್ ಕೆಂಪೋಹಳ್ಳಿ ಗ್ರಾಮದ ಬಳಿ ಬರುತ್ತಿದ್ದಾಗ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್ ಟಿಸಿ ಬಸ್ ದ್ವಿಚಕ್ರ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಅಭಿಷೇಕ್ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ಘಟನೆಯಿಂದ ತುಮಕೂರಿನ ರಸ್ತೆ ಕೆಲಕಾಲ ವಾಹನ ದಟ್ಟಣೆಯಿಂದ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆ ಬಗ್ಗೆ ಮಾಹಿತಿ ತಿಳಿದ ನೆಲಮಂಗಲ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಮೃತದೇಹವನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ಆಕ್ಟಿವೇ ಮಾಡದ ಹೊಸ ಕ್ರೆಡಿಟ್ ಕಾರ್ಡ್‌ ಬಳಸಿ 1.08 ಲಕ್ಷ ರು. ದೋಚಿದ ಸೈಬರ್ ಖದೀಮರು
ನಿದ್ರೆಗೆ ಜಾರಿದ ಪ್ರಯಾಣಿಕನ ದೋಚಿ ಮಾರ್ಗ ಮಧ್ಯೆಯೇ ಇಳಿಸಿ ಕ್ಯಾಬ್‌ ಚಾಲಕ ಪರಾರಿ!