ಕೆಎಸ್‌ಆರ್‌ಟಿಸಿ, ಒಮ್ನಿ ಮುಖಾಮುಖಿ ಡಿಕ್ಕಿ: ಗದ್ದೆಗೆ ಮಗುಚಿ ಬಿದ್ದ ಬಸ್

KannadaprabhaNewsNetwork |  
Published : Jun 27, 2025, 12:48 AM ISTUpdated : Jun 27, 2025, 12:39 PM IST
ಕೆಎಸ್‌ಆರ್‌ಟಿಸಿ, ಒಮ್ನಿ ಮುಖಾಮುಖಿ ಡಿಕ್ಕಿ: ಗದ್ದೆಗೆ ಮಗುಚಿ ಬಿದ್ದ ಬಸ್ | Kannada Prabha

ಸಾರಾಂಶ

ಕೆಎಸ್‌ಆರ್‌ಟಿಸಿ ಮತ್ತು ಒಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ರಸ್ತೆ ಬದಿಯ ಗದ್ದೆಗೆ ಮಗುಚಿ ಬಿದ್ದಿರುವ ಘಟನೆ ಮೈಸೂರು- ಬನ್ನೂರು ರಸ್ತೆಯ ಹುನಗನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

 ಮೈಸೂರು :  ಕೆಎಸ್‌ಆರ್‌ಟಿಸಿ ಮತ್ತು ಒಮ್ನಿ ವ್ಯಾನ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬಸ್ ರಸ್ತೆ ಬದಿಯ ಗದ್ದೆಗೆ ಮಗುಚಿ ಬಿದ್ದಿರುವ ಘಟನೆ ಮೈಸೂರು- ಬನ್ನೂರು ರಸ್ತೆಯ ಹುನಗನಹಳ್ಳಿ ಗೇಟ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಬಸ್‌ ನಲ್ಲಿದ್ದ 40 ಮಂದಿಯಲ್ಲಿ 25 ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮೈಸೂರಿನ ಕೆ.ಆರ್. ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

ಗುರುವಾರ ಬೆಳಗ್ಗೆ 9.30ರ ಸಮಯದಲ್ಲಿ ಕೆಎಸ್‌ಆರ್‌ ಟಿಸಿ ಬಸ್ ಮಳವಳ್ಳಿಯಿಂದ ಮೈಸೂರಿನ ಕಡೆ ಬರುತ್ತಿದ್ದು, ಒಮ್ನಿ ವ್ಯಾನ್ ಮೈಸೂರು ಕಡೆಯಿಂದ ಬನ್ನೂರು ಕಡೆ ತೆರಳುತ್ತಿತ್ತು. ಈ ಎರಡು ವಾಹನಗಳು ಹುನಗನಹಳ್ಳಿ ಗೇಟ್ ಬಳಿಯ ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದ್ದು, ಬಸ್ ರಸ್ತೆ ಬದಿಯ ಗದ್ದೆಗೆ ಮಗುಚಿ ಬಿದ್ದಿದೆ.

ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವರುಣ ಠಾಣೆ ಪೊಲೀಸರು, ಗಾಯಾಳುಗಳನ್ನು ಆಂಬ್ಯುಲೆನ್ಸ್‌ ಗಳ ಮೂಲಕ ಆಸ್ಪತ್ರೆಗೆ ರವಾನಿಸಿದ್ದು, ಗಾಯಾಳುಗಳು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆದಿದ್ದಾರೆ.

ಘಟನಾ ಸ್ಥಳಕ್ಕೆ ಎಸ್ಪಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಎಸ್ಪಿ ಸಿ. ಮಲ್ಲಿಕ್ ಭೇಟಿ ನೀಡಿ ಪರಿಶೀಲಿಸಿದರು. ಈ ಸಂಬಂಧ ವರುಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ಕಲಹ: ಕೊಲೆ ಅಂತ್ಯ
ಪೊಲೀಸ್‌ ಠಾಣೆ ಸಮೀಪ ಪಾನಮತ್ತ ದಂಪತಿಯ ರಂಪಾಟ