ಕನ್ನಡಪ್ರಭ ವಾರ್ತೆ ಮದ್ದೂರು
ವ್ಯಸನಿ ಹರೀಶ್ ನನ್ನು ಕುಟುಂಬಸ್ಥರು ವ್ಯಸನ ಮುಕ್ತ ಕೇಂದ್ರಕ್ಕೆ ದಾಖಲು ಮಾಡಿ ಚಿಕಿತ್ಸೆ ನೀಡುತ್ತಿದ್ದರು. ಭಾನುವಾರ ಮುಂಜಾನೆ ಮನೆಯಲ್ಲಿ ಯಾರಿಗೂ ಹೇಳದೆ ಅತಿಯಾಗಿ ಮದ್ಯ ಸೇವನೆ ಮಾಡಿ ಮಹೇಂದ್ರ ಕಾರು ಚಾಲನೆ ಮಾಡಿಕೊಂಡು ಮೈಸೂರು ಕಡೆಗೆ ಬರುತ್ತಿದ್ದರು. ಎಕ್ಸ್ ಪ್ರೆಸ್ ವೇನ ತೈಲೂರು ಕೆರೆ ಬಳಿ ಬೆಂಗಳೂರು, ತಾವರೆಕೆರೆ ನಿವಾಸಿಯೊಬ್ಬರ ಕಾರಿಗೆ ಡಿಕ್ಕಿ ಹೊಡೆದು ಜಖಂ ಗೊಳಿಸಿದ್ದಾರೆ.
ನಂತರ ಇದೇ ಹೆದ್ದಾರಿಯ ನಿಡಘಟ್ಟ ಸಮೀಪದ ಟಿಫಾನಿಸ್ ಹೋಟೆಲ್ ಬಳಿ ನಿಂತಿದ್ದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ತುರ್ತು ಚಿಕಿತ್ಸಾ ಘಟಕದ ವೈದ್ಯೆ ಚಿನ್ಮಯ್ ಮತ್ತು ಬಿಕಾಸ್ ಸಾಬು ಪ್ರಯಾಣಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಕಾರಣ ಕಾರು ಜಖಂಗೊಂಡು ದಂಪತಿಗೆ ಸಣ್ಣಪುಟ್ಟ ಗಾಯವಾಗಿದೆ.ನಂತರ ಅಡ್ಡಾದ್ದಿಡಿಯಾಗಿ ಕಾರು ಚಾಲನೆ ಮಾಡಿಕೊಂಡು ಸರ್ವಿಸ್ ರಸ್ತೆಯಲ್ಲಿದ್ದ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದೊಳಗೆ ಕಾರು ನುಗ್ಗಿಸಿದ್ದಾನೆ. ಈ ವೇಳೆ ಬಸ್ ಚಾಲಕರು ಮತ್ತು ಪ್ರಯಾಣಿಕರು ಆತಂಕಗೊಂಡು ಬಸ್ಸಿಗಾಗಿ ಕಾಯುತ್ತಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರು ಸ್ಥಳದಿಂದ ತೆರಳಿದ ಪರಿಣಾಮ ಯಾವುದೇ ಸಾವು ನೋವು ಆಗದೆ ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.
ನಂತರ ಸ್ಥಳಕ್ಕೆ ಧಾವಿಸಿದ ಸಂಚಾರಿ ಠಾಣೆ ಪೊಲೀಸರು ಗಾಯಗೊಂಡಿದ್ದ ಆತನನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಪಾನಮತ್ತನಾಗಿದ್ದ ಹರೀಶ್ ಆಸ್ಪತ್ರೆಯಲ್ಲೂ ಸಹ ತುರ್ತು ಚಿಕಿತ್ಸಾ ಘಟಕದ ವೈದ್ಯರು ಹಾಗೂ ನರ್ಸ್ ಮೇಲೆ ಗಲಾಟೆ ಮಾಡಿದ್ದಾನೆ. ಈತನನ್ನು ನಿಯಂತ್ರಣ ಮಾಡಲು ಬಂದ ಪೊಲೀಸರ ಮೇಲೂ ಸಹ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ.
ಈ ಸಂಬಂಧ ಮದ್ದೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ಮಾಡಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಸರ್ಕಲ್ ಇನ್ಸ್ ಪೆಕ್ಟರ್ ನವೀನ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರದ ಮೇಲ್ವಿಚಾರಕರ ಕಣ್ಣು ತಪ್ಪಿಸಿ ಮನೆಯಲ್ಲಿ ಯಾರಿಗೂ ಹೇಳದೆ ಅತಿಯಾಗಿ ಮದ್ಯ ಸೇವನೆ ಮಾಡಿ ಕಾರು ಚಾಲನೆ ಮಾಡಿಕೊಂಡು ಬಂದು ಈ ರೀತಿ ಅನಾಹುತ ಸೃಷ್ಟಿಸಿದ್ದಾನೆ ಎಂದು ಬೋರಯ್ಯ ಬೇಸರ ವ್ಯಕ್ತಪಡಿಸಿದರು.