ಪ್ರೀತಿಗೊಪ್ಪದ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಪಕ್ಕದ ಮನೆ ಯುವಕ

KannadaprabhaNewsNetwork |  
Published : Oct 17, 2025, 01:00 AM ISTUpdated : Oct 17, 2025, 08:23 AM IST
crime news

ಸಾರಾಂಶ

ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಕಿಡಿಗೇಡಿಯೊಬ್ಬ ಹತ್ಯೆಗೈದು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ. ಸ್ವತಂತ್ರಪಾಳ್ಯದ ಯಾಮಿನಿ ಪ್ರಿಯಾ (20) ಕೊಲೆಯಾದ ದುರ್ದೈವಿ.

  ಬೆಂಗಳೂರು :  ಪ್ರೀತಿಗೆ ನಿರಾಕರಿಸಿದ ವಿದ್ಯಾರ್ಥಿನಿಯೊಬ್ಬಳಿಗೆ ಚಾಕುವಿನಿಂದ ಇರಿದು ಕಿಡಿಗೇಡಿಯೊಬ್ಬ ಹತ್ಯೆಗೈದು ಪರಾರಿಯಾಗಿರುವ ಘಟನೆ ಶ್ರೀರಾಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಸ್ವತಂತ್ರಪಾಳ್ಯದ ಯಾಮಿನಿ ಪ್ರಿಯಾ (20) ಕೊಲೆಯಾದ ದುರ್ದೈವಿ. ಈ ಕೃತ್ಯ ಎಸಗಿ ಪರಾರಿಯಾಗಿರುವ ಮೃತಳ ನೆರೆ ಮನೆಯ ನಿವಾಸಿ ವಿಘ್ನೇಶ್ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕಾಲೇಜು ಮುಗಿಸಿ ಮನೆಗೆ ಮರಳುವಾಗ ಮಂತ್ರಿ ಮಾಲ್ ಸಮೀಪ ರೈಲ್ವೆ ಹಳಿಗಳ ಬಳಿ ಪ್ರಿಯಾಳಿಗೆ ಚಾಕುವಿನಿಂದ ಇರಿದು ಆರೋಪಿ ಕೊಂದಿದ್ದಾನೆ.

ಕುಟುಂಬದ ಜತೆ ಸ್ವತಂತ್ರಪಾಳ್ಯದಲ್ಲಿ ನೆಲೆಸಿದ್ದ ಪ್ರಿಯಾ, ಖಾಸಗಿ ಕಾಲೇಜಿನಲ್ಲಿ ಬಿ ಫಾರ್ಮ್‌ ಓದುತ್ತಿದ್ದಳು. ಪ್ರತಿ ದಿನ ನಡೆದುಕೊಂಡೇ ಕಾಲೇಜಿಗೆ ಹೋಗಿ ಆಕೆ ಬರುತ್ತಿದ್ದಳು. ಹಲವು ದಿನಗಳಿಂದ ಆಕೆಗೆ ಪ್ರೀತಿಸುವಂತೆ ನೆರೆಮನೆಯ ವಿಘ್ನೇಶ್ ಹಿಂದೆ ಬಿದ್ದಿದ್ದ. ಆದರೆ ಆತನ ಪ್ರಸ್ತಾಪಕ್ಕೆ ಪ್ರಿಯಾ ನಿರಾಕರಿಸಿದ್ದಳು. ಇದರಿಂದ ಕೆರಳಿದ ಆರೋಪಿ, ಕಾಲೇಜು ಮುಗಿಸಿ ಮಧ್ಯಾಹ್ನ ಮನೆಗೆ ಮರಳುತ್ತಿದ್ದ ಆಕೆಯನ್ನು ಅಡ್ಡಗಟ್ಟಿ ಕುತ್ತಿಗೆ ಹಾಗೂ ಹೊಟ್ಟೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ರಕ್ತದ ಮಡುವಿನಲ್ಲಿ ವಿದ್ಯಾರ್ಥಿನಿ ಮೃತದೇಹ ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

6 ತಿಂಗಳಿಂದ ಕಾಟ: ಮೃತಳ ತಂದೆ ಹೇಳಿಕೆ

ತಮ್ಮ ಮಗಳಿಗೆ ಪ್ರೀತಿಸುವಂತೆ ಆರು ತಿಂಗಳಿಂದ ಆರೋಪಿ ಕಾಟ ಕೊಡುತ್ತಿದ್ದ. ಆಗ ಈ ಬಗ್ಗೆ ಶ್ರೀರಾಮಪುರ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದೆವು. ಬಳಿಕ ತಾನು ಮತ್ತೆ ಪ್ರಿಯಾಳಿಗೆ ತೊಂದರೆ ಕೊಡುವುದಿಲ್ಲ ಎಂದು ಪೊಲೀಸರ ಸಮ್ಮುಖದಲ್ಲಿ ಆತ ಮುಚ್ಚಳಿಕೆ ಬರೆದುಕೊಟ್ಟಿದ್ದ. ಹೀಗಿದ್ದರೂ ನಮ್ಮ ಮಗಳಿಗೆ ಆತನ ಹಿಂಸೆ ತಪ್ಪಿರಲಿಲ್ಲ. ನಮ್ಮ ಏರಿಯಾದಲ್ಲಿ ಹೆಣ್ಣು ಮಕ್ಕಳೊಂದಿಗೆ ಆತ ಅನುಚಿತವಾಗಿ ವರ್ತಿಸುತ್ತಿದ್ದ. ಒಳ್ಳೆಯ ಸ್ವಭಾವದ ಹುಡುಗನಲ್ಲ ಆತ ಎಂದು ಮೃತಳ ತಂದೆ ಗೋಪಾಲ್ ಹೇಳಿದ್ದಾರೆ.

-ಸ್ವತಂತ್ರಪಾಳ್ಯದ ಯಾಮಿನಿ ಪ್ರಿಯಾ ಕೊಲೆಯಾದ ದುರ್ದೈವಿ ವಿದ್ಯಾರ್ಥಿನಿ-ಹತ್ಯೆಗೈದು ಪರಾರಿಯಾದ ಮೃತಳ ನೆರೆಮನೆ ವಾಸಿ ವಿಘ್ನೇಶ್ ಪತ್ತೆಗೆ ತಲಾಶ್‌-ಖಾಸಗಿ ಕಾಲೇಜಲ್ಲಿ ಬಿ ಫಾರ್ಮ್‌ ಓದುತ್ತಿದ್ದ ಪ್ರಿಯಾ ಪ್ರತಿ ದಿನ ನಡೆದೇ ಕಾಲೇಜಿಗೆ ಹೋಗಿಬರುತ್ತಿದ್ದಳು.-ಕೆಲ ದಿನಗಳಿಂದ ಆಕೆಗೆ ಪ್ರೀತಿಸುವಂತೆ ವಿಘ್ನೇಶ್ ಹಿಂದೆ ಬಿದ್ದಿದ್ದ. ಆದರೆ ಈಕೆ ನಿರಾಕರಿಸಿದ್ದಳು-ಇದರಿಂದ ಕೆರಳಿದ ಆತ ಕಾಲೇಜಿಂದ ಮನೆಗೆ ಮರಳುತ್ತಿದ್ದ ಆಕೆ ಅಡ್ಡಗಟ್ಟಿ ಕುತ್ತಿಗೆ, ಹೊಟ್ಟೆಗೆ ಇರಿದಿದ್ದ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.
Read more Articles on

Recommended Stories

ದಶದಿಕ್ಕುಗಳಿಂದ ಕರ್ನಾಟಕಕ್ಕೆ ಡ್ರಗ್ಸ್‌ ಗಂಡಾಂತರ
ದರ್ಶನ್‌ ಕೇಸ್‌: ರೇಣುಕಾ ಪೋಷಕರಿಗೆ ಸಮನ್ಸ್‌ ಜಾರಿ