ಬೆಂಗಳೂರು : ವೈಯಕ್ತಿಕ ಕಾರಣ ಹಿನ್ನಲೆ ಸ್ನೇಹಿತನಿಗೆ ಚಾಕು ಇರಿದು ಕೊಂದ ಸ್ನೇಹಿತರು

KannadaprabhaNewsNetwork |  
Published : Aug 23, 2024, 01:14 AM ISTUpdated : Aug 23, 2024, 04:37 AM IST
crime news up

ಸಾರಾಂಶ

ವೈಯಕ್ತಿಕ ಕಾರಣ ಹಿನ್ನಲೆಯಲ್ಲಿ ಪರಿಚಿತರ ಅಂತ್ಯಕ್ರಿಯೆಗೆ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತರೇ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

 ಬೆಂಗಳೂರು :  ವೈಯಕ್ತಿಕ ಕಾರಣ ಹಿನ್ನಲೆಯಲ್ಲಿ ಪರಿಚಿತರ ಅಂತ್ಯಕ್ರಿಯೆಗೆ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬನನ್ನು ಆತನ ಸ್ನೇಹಿತರೇ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಕಾಟನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಮಾರ್ಕಂಡೇಶ್ವರ ನಗರದ ನಿವಾಸಿ ಶರತ್‌ ಕುಮಾರ್‌ (30) ಕೊಲೆಯಾದ ದುರ್ದೈವಿ. ಈ ಹತ್ಯೆ ಎಸಗಿ ಪರಾರಿಯಾಗಿರುವ ಮೃತನ ಸ್ನೇಹಿತ ಶರತ್ ಸೇರಿದಂತೆ ನಾಲ್ವರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಅಂಜನಪ್ಪ ಗಾರ್ಡನ್‌ನಲ್ಲಿ ಮೃತಪಟ್ಟಿದ್ದ ಪರಿಚಿತನ ಅಂತಿಮ ದರ್ಶನಕ್ಕೆ ಬೆಳಗ್ಗೆ ಶರತ್ ಬಂದಿದ್ದಾಗ ಈ ಕೃತ್ಯ ನಡೆದಿದೆ.

ಮೃತ ಶರತ್‌ ಅಪರಾಧ ಹಿನ್ನಲೆಯವನಾಗಿದ್ದು, ಆತನ ಮೇಲೆ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಈ ಮೊದಲು ಅಂಜನಾಪ್ಪ ಗಾರ್ಡನ್‌ನಲ್ಲಿ ನೆಲೆಸಿದ್ದ ಶರತ್‌, ಕೆಲ ತಿಂಗಳ ಹಿಂದೆ ತಮ್ಮ ಕುಟುಂಬ ಸಮೇತ ಮಾರ್ಕೆಂಡೇಶ್ವರ ನಗರಕ್ಕೆ ಬಂದು ವಾಸವಾಗಿದ್ದ. ಆದರೆ ಈ ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ.

ಅಂಜನಾಪ್ಪ ಗಾರ್ಡನ್‌ನಲ್ಲಿ ಶರತ್‌ನ ಪರಿಚಿತರು ಮೃತಪಟ್ಟಿದ್ದರು. ಈ ವಿಷಯ ತಿಳಿದ ಆತ, ಮೃತ ಸಂಬಂಧಿಯ ಅಂತಿಮ ದರ್ಶನಕ್ಕೆ ಬಂದಿದ್ದ. ಆ ವೇಳೆ ವೈಯಕ್ತಿಕ ಕಾರಣಕ್ಕೆ ಆರೋಪಿ ಶರತ್‌ ಹಾಗೂ ಮೃತ ಶರತ್ ಮಧ್ಯೆ ಜಗಳವಾಗಿದೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಈ ಹಂತದಲ್ಲಿ ಕೆರಳಿದ ಆರೋಪಿಗಳು, ಶರತ್‌ಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ. ಆಗ ತೀವ್ರ ರಕ್ತಸ್ರಾವದಿಂದ ಶರತ್ ಕೊನೆಯುಸಿರೆಳೆದಿದ್ದಾನೆ.

PREV
Stay informed with the latest crime news in Kannada from Karnataka and India, criminal incidents, police actions, investigations, court verdicts, public safety alerts and breaking updates on Kannada Prabha.

Recommended Stories

ತಡೆಗೋಡೆಗೆ ಕಾರು ಡಿಕ್ಕಿ: ನವ ವಿವಾಹಿತೆ ಸಾವು
ಬೈರತಿಗೆ ಮಧ್ಯಂತರ ಬೇಲಿಲ್ಲ, ಸಿಐಡಿ ಶೋಧ