ಕನ್ನಡಪ್ರಭ ವಾರ್ತೆ ಬೆಂಗಳೂರು
ದೊಡ್ಡಕಲ್ಲಸಂದ್ರದ ತಮ್ಮ ಮನೆಯಲ್ಲಿ ನ.6 ರಂದು ರಾತ್ರಿ ಭೂ ವಿಜ್ಞಾನಿ ಪ್ರತಿಮಾ ಕೊಲೆಗೀಡಾಗಿದ್ದರು. ಈ ಕೃತ್ಯದಲ್ಲಿ ಅವರ ಮಾಜಿ ಕಾರು ಚಾಲಕ ಕಿರಣ್ ಬಂಧನವಾಗಿತ್ತು. ಮೊದಲು ತನ್ನನ್ನು ಕೆಲಸದಿಂದ ವಜಾಗೊಳಿಸಿದ್ದ ಸಿಟ್ಟಿಗೆ ಪ್ರತಿಮಾ ಅವರನ್ನು ಕಿರಣ್ ಹತ್ಯೆ ಮಾಡಿದ್ದ ಎನ್ನಲಾಗಿತ್ತು. ಬಳಿಕ ಪೊಲೀಸರು ತನಿಖೆ ಮುಂದುವರೆಸಿದಾಗ ಪ್ರತಿಮಾ ಅವರನ್ನು ಹತ್ಯೆಗೈದ ಬಳಿಕ ₹5 ಲಕ್ಷ ನಗದು ಹಾಗೂ ಚಿನ್ನಾಭರಣವನ್ನು ಆರೋಪಿ ದೋಚಿದ್ದ ಸಂಗತಿ ಬಯಲಾಗಿತ್ತು. ಹೀಗಾಗಿ ಹಣಕ್ಕಾಗಿಯೇ ಪ್ರತಿಮಾ ಅವರನ್ನು ಕಿರಣ್ ಕೊಲೆ ಮಾಡಿದ್ದ ಎಂದು ಪೊಲೀಸರು ಹೇಳಿದ್ದರು.
ಈ ಪ್ರಕರಣವು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಎರಡು ತಿಂಗಳ ತನಿಖೆಗೆ ನಡೆಸಿದ ಪೊಲೀಸರು, ಕೃತ್ಯ ಸಂಬಂಧ ಮೃತ ಪ್ರತಿಮಾ ಕುಟುಂಬದವರು, ಸಹೋದ್ಯೋಗಿಗಳು ಹಾಗೂ ನೆರೆಹೊರೆಯವರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದಿದ್ದಾರೆ. ಅಲ್ಲದೆ ಆರೋಪಿ ಕಿರಣ್ ಕುರಿತು ಸಹ ಸಾಕಷ್ಟು ಪುರಾವೆ ಕಲೆ ಹಾಕಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ. -ಕೋಟ್-ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ. ಶೀಘ್ರವೇ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸುತ್ತೇವೆ.
-ರಾಹುಲ್ ಕುಮಾರ್ ಶಹಾಪುರವಾಡ್, ಡಿಸಿಪಿ, ದಕ್ಷಿಣ ವಿಭಾಗ.